ವೀರಾಜಪೇಟೆ, ಫೆ. ೨೨: ಗೋಣಿಕೊಪ್ಪ ಕೊಡವ ಸಮಾಜದ ಸಮುದಾಯ ಭವನಕ್ಕೆ ಅನುದಾನ ಕೋರಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಗೋಣಿಕೊಪ್ಪ ಕೊಡವ ಸಾಂಸ್ಕöÈತಿಕ ಕೇಂದ್ರದ ಆಡಳಿತ ಮಂಡಳಿಯವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗೋಣಿಕೊಪ್ಪಲಿನಲ್ಲಿ ಕೊಡವ ಕಲೆ, ಸಂಸ್ಕöÈತಿ, ಆಚಾರ, ವಿಚಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕೊಡವ ಸಮಾಜ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇಲ್ಲಿ ಕೊಡವ ಜನಾಂಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ. ಈತನಕ ಸಮುದಾಯ ಭವನದ ಕಾಮಗಾರಿಗಳಿಗೆ ಸುಮಾರು ೧ ಕೋಟಿ ೫೦ ಲಕ್ಷ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಅಂದಾಜು ೮.೫೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಕಟ್ಟಡಕ್ಕೆ ಹಣಕಾಸಿನ ತೊಂದರೆಯಿAದ ಕಾಮಗಾರಿಯು ಸದ್ಯಕ್ಕೆ ಸ್ಥಗಿತಗೊಂಡಿದೆ. ಸಮುದಾಯ ಭವನ ಪೂರ್ಣಗೊಳಿಸಲು ೮ ಕೋಟಿ ೫೦ ಲಕ್ಷ ರೂಗಳ ಅನುದಾನ ಅವಶ್ಯಕತೆ ಇರುವುದಾಗಿ ಮನವಿ ಮಾಡಿ ಶಾಸಕರಾದ ಎ.ಎಸ್ ಪೊನ್ನಣ್ಣ ಅವರ ನೇತೃತ್ವದಲ್ಲಿ ಗೋಣಿಕೊಪ್ಪ ಕೊಡವ ಸಾಂಸ್ಕöÈತಿಕ ಕೇಂದ್ರದ ಆಡಳಿತ ಮಂಡಳಿಯವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷ ಎ.ಸಿ. ಪೂಣಚ್ಚ, ಉಪಾಧ್ಯಕ್ಷ ಸಿ.ಪಿ. ಪೂಣಚ್ಚ, ಕಾರ್ಯದರ್ಶಿ ಸಿ.ಡಿ. ಮಾದಪ್ಪ, ಜಂಟಿ ಕಾರ್ಯದರ್ಶಿ ರೀಟಾ ದೇಚಮ್ಮ, ಖಜಾಂಚಿ ಕೆ.ಸಿ. ಬಿದ್ದಪ್ಪ, ನಿರ್ದೇಶಕಿ ಬಿದ್ದಂಡ ಪ್ರೇಮ ಹಾಗೂ ಸಮಾಜದ ಖಾಯಂ ನಿರ್ದೇಶಕ ಅಜ್ಜಿನಿಕಂಡ ಮಹೇಶ್ ನಾಚಯ್ಯ ಉಪಸ್ಥಿತರಿದ್ದರು.