ಮುಳ್ಳೂರು, ಫೆ. ೨೨: ‘ದುಶ್ಚಟ ದುರಾಭ್ಯಾಸಗಳಿಂದ ಆರೋಗ್ಯ ಮೇಲೆ ದುಷ್ಪಾರಿಣಾಮ ಬೀರುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ದುರಭ್ಯಾಸಗಳಿಂದ ದೂರ ಇದ್ದು ಈ ಮೂಲಕ ತಮ್ಮ ಆರೋಗ್ಯವನ್ನು ತಾವೆ ಕಾಪಾಡಿ ಕೊಳ್ಳಬೇಕು’ ಎಂದು ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವೈಶಾಖ ಅಭಿಪ್ರಾಯಪಟ್ಟರು.

ಅವರು ಸಮೀಪದ ಕೊಡ್ಲಿಪೇಟೆ ಕಿರಿಕೊಡ್ಲಿ ಶ್ರೀ ಸದಾಶಿವ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಕೊಡ್ಲಿಪೇಟೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮತ್ತು ಜನ ಜಾಗೃತಿ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಸ್ವಾಸ್ಥö್ಯ ಸಂಕಲ್ಪ’ ಜನ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡುತ್ತಿದ್ದರು. ದುರಾಭ್ಯಾಸದಿಂದ ಸಾವು ಸಹ ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ಇಂಥಹ ದುಶ್ಚಟಗಳಿಂದ ದೂರ ಇರುವಂತೆ ಸಲಹೆ ನೀಡಿದರು.

ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯ ಭಗವಾನ್ ಗೌಡ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದುಶ್ಚಟದಿಂದ ದೂರ ಇರಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳಲ್ಲಿ ಒಂದಾದ ಜನ ಜಾಗೃತಿ ವೇದಿಕೆಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ಜನ ಜಾಗೃತಿ ವೇದಿಕೆಯು ಸ್ವಾಸ್ಥö್ಯ ಸಂಕಲ್ಪ ಎಂಬ ಜನ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು. ಉತ್ತಮ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಈ ವಿಷಯದ ಕುರಿತು ಸಮುದಾಯ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಉಪನ್ಯಾಸ ನೀಡಿದರು. ಕಾರ್ಯ ಕ್ರಮದಲ್ಲಿ ವಲಯ ಮೇಲ್ವಿಚಾರಕ ನಾಗರಾಜ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕಿ ಲತಾ, ಸೇವಾ ಪ್ರತಿನಿಧಿಗಳಾದ ಫಾತಿಮಾ, ರಾಣಿ, ಕವಿತ, ಶಾರದಮ್ಮ ಮುಂತಾದವರಿದ್ದರು.