ಕುಶಾಲನಗರ, ಫೆ. ೨೧: ದೇವಾಲಯಗಳು ಮತ್ತು ಸಂಸ್ಕೃತಿಯ ರಕ್ಷಣೆಗಾಗಿ ತಾ. ೨೩ ರಂದು ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಪ್ರಮುಖರಾದ ಚಂದ್ರ ಮೊಗವೀರ ತಿಳಿಸಿದ್ದಾರೆ.

ಕುಶಾಲನಗರದ ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇವಸ್ಥಾನಗಳ ಸರಕಾರೀಕರಣ, ದೇವಸ್ಥಾನಗಳನ್ನು ಅಪವಿತ್ರಗೊಳಿಸುವುದು, ಮೂರ್ತಿಭಂಜನ, ಅನೇಕ ದೇವಸ್ಥಾನಗಳನ್ನು ಅನಧಿಕೃತವೆಂದು ಧ್ವಂಸಗೊಳಿಸುವುದು, ದೇವಸ್ಥಾನಗಳ ಜಮೀನುಗಳನ್ನು ವಶಪಡಿಸಿಕೊಳ್ಳುವುದು, ದೇವನಿಧಿ ಅಪವ್ಯಯ ಈ ರೀತಿಯ ಅನೇಕ ಸಮಸ್ಯೆಗಳು ಹೆಚ್ಚಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಈ ಎಲ್ಲಾ ಕಾರಣಗಳಿಂದ ದೇವಸ್ಥಾನಗಳಲ್ಲಿ ಧರ್ಮಪ್ರಸಾರ ಮಾಡಲು, ಭಕ್ತಾದಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು, ದೇವಸ್ಥಾನಗಳ ಸಂಘಟನೆಯನ್ನು ಮಾಡುವ ಅನಿವಾರ್ಯತೆ ಬಂದಿದೆ. ದೇವಾಲಯಗಳಿಗೆ ಆಗಮಿಸುವ ಭಕ್ತಾದಿಗಳಿಗೆ ವಸ್ತçಸಂಹಿತೆಯನ್ನು ಅಳವಡಿಸಲು ಕುಶಾಲನಗರ ದೇವಸ್ಥಾನಗಳ ಒಕ್ಕೂಟ ಮತ್ತು ಹಿಂದೂ ಜನಜಾಗೃತಿ ಆಶ್ರಯದಲ್ಲಿ ತಾ. ೨೩ ರಂದು ಕುಶಾಲನಗರ ರೈತ ಸಹಕಾರ ಭವನದಲ್ಲಿ ಜಿಲ್ಲಾಮಟ್ಟದ ದೇವಸ್ಥಾನ ಪರಿಷತ್ತು ಅಧಿವೇಶನ

ನಡೆಯಲಿದೆ ಎಂದರು.

ಕುಶಾಲನಗರ ದೇವಸ್ಥಾನಗಳ ಒಕ್ಕೂಟದ ಅಧ್ಯಕ್ಷ ಎಂ.ಕೆ. ದಿನೇಶ್ ಮಾತನಾಡಿ, ಕುಶಾಲನಗರದಲ್ಲಿ ನಡೆಯುವ ದೇವಸ್ಥಾನ ಪರಿಷತ್ತು ಅಧಿವೇಶನಕ್ಕೆ ಜಿಲ್ಲೆಯಿಂದ ೩೦೦ಕ್ಕೂ ಹೆಚ್ಚು ಆಮಂತ್ರಿತ ದೇವಸ್ಥಾನಗಳ ಆಡಳಿತ ಮಂಡಳಿ ಸದಸ್ಯರು, ಅರ್ಚಕರು, ಪುರೋಹಿತರು, ಪ್ರತಿನಿಧಿಗಳು, ದೇವಸ್ಥಾನಗಳ ರಕ್ಷಣೆಗಾಗಿ ಹೋರಾಡುವ ನ್ಯಾಯವಾದಿಗಳು ಧಾರ್ಮಿಕ ಚಿಂತಕರು ಮುಂತಾದವರು ಪಾಲ್ಗೊಳ್ಳಲಿದ್ದಾರೆ ಎಂದರು.

ಹೊಸೂರಿನ ಮಹದೇಶ್ವರ ದೇವಸ್ಥಾನದ ಪ್ರಮುಖರಾದ ಕೊಲ್ಲೀರ ಧರ್ಮಜ ಮಾತನಾಡಿ, ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಕೇವಲ ೬ ತಿಂಗಳುಗಳಲ್ಲಿ ದೇಶಾದ್ಯಂತ ೨೭೫ ದೇವಸ್ಥಾನಗಳಲ್ಲಿ ವಸ್ತçಸಂಹಿತೆ ಜಾರಿಗೆ ತಂದಿದೆ ಮತ್ತು ಮಹಾಸಂಘದ ಅಭಿಯಾನದಿಂದ ಪ್ರೇರಿತರಾದ ಅನೇಕ ವಿಶ್ವಸ್ಥರು ತಮ್ಮ ದೇವಸ್ಥಾನಗಳಲ್ಲಿ ವಸ್ತçಸಂಹಿತೆ ಜಾರಿಗೊಳಿಸುತ್ತಿದ್ದಾರೆ ಎಂದು ಹೇಳಿದರು.

ಅಧಿವೇಶನ ವೀರಾಜಪೇಟೆ ಅರಮೇರಿ ಮಠಾಧೀಶರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಚಾಲಕ ಮೋಹನ್ ಗೌಡ ಮತ್ತಿತರ ಗಣ್ಯರು ಪಾಲ್ಗೊಳ್ಳುವರು.

ಕುಶಾಲನಗರ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಸಮಾವೇಶ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆ ತನಕ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೭೨೦೪೦೮೨೬೫೮ಗೆ ಸಂಪರ್ಕಿಸುವAತೆ ಕಾರ್ಯಕ್ರಮ ಸಂಯೋಜಕ ವಿಜಯಕುಮಾರ್ ತಿಳಿಸಿದ್ದಾರೆ.

ಗೋಷ್ಠಿಯಲ್ಲಿ ಪ್ರಮುಖರಾದ ಬಳಪಂಡ ಪವನ್ ಮತ್ತು ವಿವಿಧ ದೇವಾಲಯಗಳ ಪ್ರತಿನಿಧಿಗಳು ಇದ್ದರು.