ಸೋಮವಾರಪೇಟೆ, ಫೆ. ೨೨: ತಾಲೂಕಿನ ಯಡವನಾಡು ಗ್ರಾಮದಲ್ಲಿ ಬುಧವಾರ ರಾತ್ರಿ ವೇಳೆಯಲ್ಲಿ ಕಾಡಾನೆಗಳು ಫಸಲಿಗೆ ಬಂದ ಬೆಳೆಗಳನ್ನು ನಾಶಪಡಿಸಿದ್ದು ಅರಣ್ಯ ಇಲಾಖೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಈಗಾಗಲೇ ಕಾಫಿ, ಮೆಣಸು, ಭತ್ತದ ಫಸಲು ನಷ್ಟವಾಗಿದ್ದು ಇದೀಗ ಕಾಡಾನೆ ದಾಳಿಯಿಂದ ಹಲಸು, ಜೋಳ, ಫಸಲಿಗೆ ಬಂದಿದ್ದ ಗೆಣಸು, ಪಪ್ಪಾಯ, ಬಾಳೆ ಗಿಡಗಳು ಸಂಪೂರ್ಣ ನಾಶಗೊಂಡಿವೆ. ಕಾಡಾನೆ ದಾಳಿ ಕುರಿತು ಹಲವು ವರ್ಷಗಳಿಂದ ಇಲಾಖೆಗೆ ಮನವಿ ನೀಡುತ್ತಾ ಬಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮದಲ್ಲಿ ಆನೆ ಹಾವಳಿ ತಡೆಗೆ ಶಾಶ್ವತ ಯೋಜನೆ ತಯಾರಿಸಬೇಕೆಂದು ಬೆಳೆ ನಷ್ಟಪಡಿಸಿಕೊಂಡ ಕೃಷಿಕರಾದ ಯು.ಪಿ.ರಾಜು, ನಂದಕುಮಾರ್, ಜಯಂತ್ ಮತ್ತಿತರರು ಆಗ್ರಹಿಸಿದ್ದಾರೆ.