ಕೂಡಿಗೆ, ಫೆ. ೨೩: ಕೂಡಿಗೆ ಗ್ರಾಮ ಪಂಚಾಯಿತಿ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಟಿ. ಗಿರೀಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆಗಳನ್ನು ತುರ್ತಾಗಿ ಕೈಗೊಳ್ಳುವ ಮೂಲಕ ಅದರ ಕ್ರಮಬದ್ಧವಾದ ನಿರ್ವಹಣೆ ಮಾಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಅರುಣ್ ರಾವ್, ಅನಂತ, ಶಿವಕುಮಾರ್, ರವಿ ಚಂದ್ರು ಗ್ರಾಮ ಪಂಚಾಯಿತಿಯಲ್ಲಿ ಖರ್ಚು ಮಾಡಿದ ಹಣಕಾಸು ಬಗ್ಗೆ ಕೇಳಿದಾಗ ಅಧಿಕಾರಿ ವರ್ಗದವರಿಂದ ಸಮರ್ಪಕವಾದ ಉತ್ತರ ಬಾರದ ಹಿನ್ನೆಲೆಯಲ್ಲಿ ಅನಧಿಕೃತವಾಗಿ ಹಣವನ್ನು ಖರ್ಚು ಮಾಡಲಾಗಿದೆ. ಇದರ ಬಗ್ಗೆ ತಾಲೂಕು ಮಟ್ಟದಲ್ಲಿ ತನಿಖೆ ಕೈಗೊಳ್ಳುವಂತೆ ಸಭೆಯಲ್ಲಿ ಒತ್ತಾಯ ಮಾಡಿದರು.
ನಂತರ ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೈಗೊಂಡ ತೀರ್ಮಾ ನಗಳನ್ನು ಅಭಿವೃದ್ಧಿ ಅಧಿಕಾರಿ ಕ್ರಮ ಬದ್ಧವಾದ ಅನುಷ್ಠಾನ ಮಾಡುತ್ತಿಲ್ಲ. ಇದರಿಂದಾಗಿ ಅಭಿವೃದ್ಧಿ ಅಧಿಕಾರಿ ಯನ್ನು ವರ್ಗಾವಣೆಗೊಳಿಸುವಂತೆ ಜಿಲ್ಲಾಮಟ್ಟ ಅಧಿಕಾರಿ ಪತ್ರ ವ್ಯವಹಾರದ ಮಾಡುವ ಬಗ್ಗೆ ಹಾಜರಿದ್ದ ಸರ್ವ ಸದಸ್ಯರು ತೀರ್ಮಾನ ಕೈಗೊಂಡರು. ಸಭೆಯಲ್ಲಿ ಸ್ವಚ್ಛ ಭಾರತ್ ಯೋಜನೆಯ ರೂ. ೧.೭೦ ಲಕ್ಷ ವೆಚ್ಚದಲ್ಲಿ ಕೊಳವೆ ಬಾವಿಗಳನ್ನು ಕೊರೆಸುವ ಮತ್ತು ೧೫ ಹಣಕಾಸು ಯೋಜನೆ ಕ್ರಿಯಾ ಯೋಜನೆ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆಗಳು ನಡೆದವು. ಪ್ರಮುಖವಾಗಿ ಜಲ ಜೀವನ್ ಮಿಷನ್ ಕುಡಿಯುವ ನೀರಿನ ವ್ಯವಸ್ಥೆಯನ್ನು ಉಪ ಗ್ರಾಮಗಳಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡುವ ಬಗ್ಗೆ ಸುರ್ದೀಘ ಚರ್ಚೆಗಳು ನಡೆದವು.
ಅಧ್ಯಕ್ಷತೆಯನ್ನು ವಹಿಸಿದ್ದ ಕೆ.ಟಿ. ಗಿರೀಶ್ ಮಾತನಾಡಿ, ಕುಡಿಯುವ ನೀರಿನ ವ್ಯವಸ್ಥೆ ಮತ್ತು ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಪ್ರಗತಿಗೆ ಎಲ್ಲಾ ಸದಸ್ಯರ ಸಹಕಾರ ಮುಖ್ಯ ಎಂದರು.
ಸಭೆಯಲ್ಲಿ ಉಪಾಧ್ಯಕ್ಷೆ ಜಯಶ್ರೀ, ಸದಸ್ಯರಾದ ಟಿ.ಪಿ. ಹಮೀದ್, ಹೆಚ್.ಎಸ್. ರವಿ, ಅರುಣ್ ರಾವ್, ಅನಂತ, ಶಿವಕುಮಾರ್, ಮೋಹಿನಿ ತಮ್ಮಣೇಗೌಡ, ಮಂಗಳಾ, ಜಯಶೀಲಾ, ವಾಣಿ, ರತ್ನಮ್ಮ, ಪಲ್ಲವಿ, ಲಕ್ಷಿö್ಮ, ಹೆಚ್.ಆರ್. ಚಂದ್ರು, ಅಭಿವೃದ್ಧಿ ಅಧಿಕಾರಿ ಮಂಜಳಾ, ಕಾರ್ಯದರ್ಶಿ ಪುನೀತ್ ಹಾಜರಿದ್ದರು.