ನಾಪೋಕ್ಲು, ಫೆ. ೨೫: ಒಬ್ಬ ವ್ಯಕ್ತಿಯ ಆರೋಗ್ಯ ಹದಗೆಟ್ಟರೆ ಅದರ ಪರಿಣಾಮ ಇಡೀ ಕುಟುಂಬದ ಮೇಲೆ ಬೀರುತ್ತದೆ. ಉತ್ತಮ ಆರೋಗ್ಯ ಹೊಂದಿ ಸಮಾಜಕ್ಕೆ ಬೇಕಾದವರಾಗಿ ಬದುಕುವುದೇ ನಿಜವಾದ ಜೀವನ ಎಂದು ವೀರಾಜಪೇಟೆ ಶಾಸಕರಾದ ಎಸ್.ಪೊನ್ನಣ್ಣ ಅಭಿಪ್ರಾಯಿಸಿದರು.
ನಾಪೋಕ್ಲು ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಥಳೀಯ ನಂದಿನಿ ಆಸ್ಪತ್ರೆಯ ಬೆಳ್ಳಿ ಹಬ್ಬದ ಪ್ರಯುಕ್ತ ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಬೆಂಗಳೂರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ , ಎ.ಕೆ ಸುಬ್ಬಯ್ಯ ಎಜುಕೇಶನ್ ಟ್ರಸ್ಟ್ ,ಕೊಡವ ಸಮಾಜ ಸ್ಪೋರ್ಟ್ಸ್ ಕಲ್ಚರಲ್ ಅಸೋಸಿಯೇಷನ್ ಹಾಗೂ ಶ್ರೀರಾಮ ಟ್ರಸ್ಟ್ ಜಂಟಿಯಾಗಿ ನಂದಿನಿ ಆಸ್ಪತ್ರೆಯ ಬೆಳ್ಳಿ ಮಹೋತ್ಸವದ ಅಂಗವಾಗಿ ನಡೆಸಿದ ಉಚಿತ ಬೃಹತ್ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದು ವೈದ್ಯಕೀಯ ವಿಜ್ಞಾನ ಸಾಕಷ್ಟು ಪ್ರಗತಿಯಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳು ವುದರೊಂದಿಗೆ, ಸರ್ಕಾರದ ಯೋಜನೆ ಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪೊನ್ನಣ್ಣ ಕರೆ ನೀಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ ಕೊಡಗು ಮೆಡಿಕಲ್ ಕಾಲೇಜು ಅಧೀನದಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳಿದ್ದು, ಜಿಲ್ಲೆಯ ಜನತೆ ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.
ಈ ಸಂದರ್ಭ ವೈದ್ಯರಾದ ಡಾ. ಸುಶ್ರುತ್ ಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಡಾ ವಿಶಾಲ್ ಕುಮಾರ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಿನಿ ಆಸ್ಪತ್ರೆಯ ನಿರ್ದೇಶಕ ಹಾಗೂ ಕೊಡವ ಸಮಾಜದ ಸ್ಪೋರ್ಟ್ಸ್ ಅಂಡ್ ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ಬಿದ್ದಾಟಂಡ ತಮ್ಮಯ್ಯ ವಹಿಸಿ ಆಸ್ಪತ್ರೆ ನಡೆದು ಬಂದ ದಾರಿ ಹಾಗೂ ಕಾರ್ಯವೈಖರಿ ಬಗ್ಗೆ ಮಾತನಾಡಿದರು.
ವೇದಿಕೆಯಲ್ಲಿ ವೈದ್ಯಕೀಯ ಅಧೀಕ್ಷಕ ಡಾ. ರೂಪೇಶ್ ಕುಮಾರ್, ಆರೋಗ್ಯಾಧಿಕಾರಿ ಡಾ. ಕೆ.ಎಂ ಸತೀಶ್ ಕುಮಾರ್, ಜಿಲ್ಲಾ ಶಸ್ತ ಚಿಕಿತ್ಸಕ ಡಾ. ನಂಜುAಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ. ಸತೀಶ್, ವೈದ್ಯಾಧಿಕಾರಿ ಡಾ. ಹೆಚ್.ವಿ. ದೇವದಾಸ್, ಬೆಂಗಳೂರಿನ ಸಪ್ತಗಿರಿ ಮೆಡಿಕಲ್ ಕಾಲೇಜಿನ ಪ್ರತಿನಿಧಿ ನಿರಂಜನ್ ಶೆಟ್ಟಿ , ಗ್ರಾ.ಪಂ. ಅಧ್ಯಕ್ಷೆ ವನಜಾಕ್ಷಿ, ಹೊದ್ದೂರು ಪಂಚಾಯಿತಿ ಅಧ್ಯಕ್ಷ ಹೆಚ್.ಎ. ಹಂಸ, ಶ್ರೀ ರಾಮಟ್ರಸ್ಟ್ ಶಾಲೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ಮತ್ತಿತರರು ಹಾಜರಿದ್ದರು.
ಕೆಲೇಟಿರ ದಿವ್ಯ ಮುತ್ತಪ್ಪ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಕಲ್ಯಾಟಂಡ ಶಾರದ ಸ್ವಾಗತಿಸಿದರು. ಬಾಳೆಯಡ ದಿವ್ಯ ಮಂದಪ್ಪ ಮತ್ತು ನಾಯಕಂಡ ತೃಷ ತಂಗಮ್ಮ ನಿರೂಪಿಸಿ, ದಿವ್ಯ ವಂದಿಸಿದರು.