ಸುಂಟಿಕೊಪ್ಪ, ಫೆ. ೨೮: ಇಲ್ಲಿನ ಗ್ರಾಮ ಪಂಚಾಯಿತಿ ವತಿಯಿಂದ ಮಾಂಸ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಪರ-ವಿರೋಧ ಚರ್ಚೆಗಳಾಗಿ ಗದ್ದಲದ ಗೂಡಾದ ಘಟನೆ ನಡೆಯಿತು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸರ್ವ ಸದಸ್ಯರ ಸಭೆ ಕರೆದು ಕೋಳಿ, ಕುರಿ, ಮೀನು ಮಾಂಸ ಮಳಿಗೆಗಳ ಹರಾಜು ಪ್ರಕ್ರಿಯೆಗೆ ಒಪ್ಪಿಗೆ ಪಡೆದು ಸಾರ್ವಜನಿಕ ಜಾಹೀರಾತು ಮೂಲಕ ಟೆಂಡರ್ ಪ್ರಕ್ರಿಯೆಗೆ ೧೫ ದಿನಗಳ ಹಿಂದೆಯೇ ಚಾಲನೆ ನೀಡಲಾಗಿತ್ತು. ಅದರಂತೆ ತಾ.೨೭ ರಂದು ಟೆಂಡರ್ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಬೆಳಗ್ಗಿನಿಂದ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ನಿಗದಿತ ಶುಲ್ಕವನ್ನು ನಿಗದಿತ ನಮೂನೆಯಲ್ಲಿ ಬ್ಯಾಂಕಿಗೆ ಪಾವತಿ ಮಾಡಲು ಪ್ರಸ್ತುತ ಅಂಗಡಿ ಹೊಂದಿರುವ ಕೆಲವು ವ್ಯಾಪಾರಸ್ಥರು ವಿಫಲರಾಗಿದ್ದಾರೆ. ಇದೇ ಹೊತ್ತಿಗೆ ಹಾಲಿ ವ್ಯಾಪಾರಸ್ಥರ ಪೈಕಿ ಕೆಲವರು ಮತ್ತು ಹೊಸಬರು ನಿಗದಿತ ಶುಲ್ಕಕಟ್ಟಿ ಟೆಂಡರ್ ಪ್ರಕಿಯೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ. ಇದು ಗೊಂದಲಕ್ಕೆ ಕಾರಣವಾಗಿದ್ದು, ಟೆಂಡರ್ ಪ್ರಕ್ರಿಯೆ ನಡೆಯಲು ಬಿಡುವುದಿಲ್ಲ ಎಂಬ ಕೆಲವು ಪಂಚಾಯಿತಿ ಸದಸ್ಯರ ಮಾತನ್ನು ನಂಬಿ ಕೆಲವು ವ್ಯಾಪಾರಸ್ಥರು ಮೋಸ ಹೋಗಿರುವುದು ಬಹಿರಂಗಗೊAಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯಿAದಲೇ ಪಂಚಾಯಿತಿ ಸದಸ್ಯರು ಹಾಗೂ ಅಭಿವೃದ್ಧಿ ಅಧಿಕಾರಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರ ಮತ್ತು ವಿರೋಧ ಗುಂಪುಗಳಾಗಿ ಬುಧವಾರದ ಸಭೆಯಲ್ಲೂ ಮಾತಿನ ಸಮರ ನಡೆದಿದೆ. ಪರಿಸ್ಥಿತಿ ಕೈಮೀರಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಎಂ.ಸಿ. ಶ್ರೀಧರ್ ಮತ್ತು ನಾಲ್ವರು ಸಹಾಯಕ ಸಬ್‌ಇನ್ಸ್ಪೆಕ್ಟರ್ ಸಹಿತವಾದ ಪೊಲೀಸ್ ತಂಡ ಸಭೆಗೆ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕೈಗೊಂಡಿರುವ ಹರಾಜು ಪ್ರಕ್ರಿಯೆ ಕಾನೂನು ಬದ್ಧವಾಗಿದ್ದು, ಅದರಂತೆ ಮುಂದುವರಿಯುತ್ತೇವೆ ಎಂದು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಹೇಳಿದರು. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹಾಗೂ ಕುಶಾಲನಗರ ವೃತ್ತನಿರೀಕ್ಷಕ ರಾಜೇಶ್ ಕೋಟ್ಯಾನ್ ಉಪಸ್ಥಿತಿಯಲ್ಲಿ ನಡೆದ ಮಾತುಕತೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪಿ.ಆರ್.ಸುನಿಲ್ ಕುಮಾರ್ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮುಂದುವರೆಸಲು ತೀರ್ಮಾನಿಸಲಾಗಿದೆ. ಹಳಬರು ಮತ್ತು ಹೊಸಬರು ಎಂಬುದು ಹರಾಜು ಪ್ರಕ್ರಿಯೆಯಲ್ಲಿ ಇಲ್ಲ ಬದಲಾಗಿ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳು ಇರುತ್ತವೆ ಎಂದು ಹೇಳಿದರು.

ಪಂಚಾಯಿತಿ ಸದಸ್ಯ ರಫೀಕ್ ಖಾನ್ ಮಾತನಾಡಿ ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿಲ್ಲ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಮ್ಮ ಮೂಗಿನ ನೇರಕ್ಕೆ ಟೆಂಡರ್ ಪ್ರಕ್ರಿಯೆಯನ್ನು ಮಾಡಿದ್ದಾರೆ ಎಂದು ಆರೋಪಿಸಿದರು. ಸಾಕಷ್ಟು ಚರ್ಚೆಯ ಬಳಿಕ ತಾಲೂಕು ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಅವರು ಈಗಾಗಲೇ ಹರಾಜು ಪ್ರಕ್ರಿಯೆಯನ್ನು ಕಾನೂನು ಬದ್ಧವಾಗಿ ಮಾಡಿದ್ದು, ಅದರಂತೆ ಮುಂದುವರಿಯಲಾಗುವುದೆAದು ಪ್ರಕಟಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಮೀನು, ಕೋಳಿ ಮತ್ತು ಕುರಿ ಮಾಂಸ ಮಳಿಗೆಗಳ ತೆರವು ವಿಚಾರ ರಾಜ್ಯ ಉಚ್ಛನ್ಯಾಯಾಲಯದ ಮುಂದೆ ಇದ್ದು ಈ ಬಗ್ಗೆ ಏನನ್ನು ಹೇಳ ಬಯಸುವುದಿಲ್ಲ. ಆದರೆ ನ್ಯಾಯಾಲಯದ ತೀರ್ಮಾನಕ್ಕೆ ನಾವು ಬದ್ಧರಾಗಿರಬೇಕಾಗುತ್ತದೆ ಎಂದು ಪ್ರತಿಕ್ರಿಯಿಸಿದರು.