ಮಡಿಕೇರಿ, ಫೆ. ೨೯: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್ಕ್ರಾಸ್ ಸೊಸೈಟಿ ಹಾಗೂ ಜಿಲ್ಲಾ ವಿಶೇಷಚೇತನರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ೨೨ ವಿಶೇಷ ಚೇತನರಿಗೆ ವೀಲ್ಚೇರನ್ನು ವಿತರಿಸಲಾಯಿತು.
ನಗರದ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ವೀಲ್ಚೇರ ನ್ನು ವಿತರಿಸಲಾಯಿತು. ರೂ. ೨೫,೪೧೦ ವೆಚ್ಚದ ೧೦ ವೀಲ್ಚೇರ್ಗಳು ಮತ್ತು ರೂ. ೧೭ ಸಾವಿರ ವೆಚ್ಚದ ೧೯ ವೀಲ್ಚೇರ್ಗಳನ್ನು ಕೊಡಗು ಮತ್ತು ಹುಣಸೂರು ವಿಭಾಗಕ್ಕೆ ಸೇರಿದ ೨೯ ವಿಶೇಷಚೇತನರಿಗೆ ವಿತರಿಸಲಾಯಿತು.
ಈ ಸಂದರ್ಭ ಮಾತನಾಡಿದ ಜಿಲ್ಲಾ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ಕೆ.ಜೆ. ವಿಮಲ ಅವರು ಸರ್ಕಾರದ ಜೊತೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ವಿಶೇಷಚೇತನರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಹಕಾರಿಯಾಗಲಿದೆ.
ಜಿಲ್ಲೆಯಲ್ಲಿ ೬,೪೦೦ ವಿಶೇಷಚೇತನರಿಗೆ ಗುರುತಿನ ಚೀಟಿ ವಿತರಿಸಲಾಗಿದ್ದು, ಸರ್ಕಾರದಿಂದ ವಿಶೇಷಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಹೇಳಿದರು.
ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಸಭಾಪತಿಯಾದ ಬಿ.ಕೆ. ರವೀಂದ್ರ ರೈ ಮಾತನಾಡಿ, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಿAದ ಉತ್ತಮ ಗುಣಮಟ್ಟದ ವೀಲ್ಚೇರ್ಗಳನ್ನು ವಿತರಿಸಲಾಗುತ್ತದೆ. ಇಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಇತರರಂತೆ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ರೋಟರಿ ಮಿಸ್ಟಿಹಿಲ್ಸ್ ಕಾರ್ಯದರ್ಶಿ ರತ್ನಾಕರ ರೈ ಮಾತನಾಡಿ, ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ವಿಶೇಷಚೇತನರಿಗೆ ಕೈಲಾದಷ್ಟು ಅಗತ್ಯ ಸಹಕಾರ ಕಲ್ಪಿಸಲಾಗುತ್ತದೆ. ಆ ನಿಟ್ಟಿನಲ್ಲಿ ಇಂತಹ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದರು. ವಿಶೇಷಚೇತನರ ಜಿಲ್ಲಾ ಸಂಘದ ಅಧ್ಯಕ್ಷ ಮಹೇಶ್ವರ್ ಮಾತನಾಡಿ, ವೀಲ್ಚೇರ್ಗಳನ್ನು ಪಡೆದು ಮೂಲೆಗೆ ಎಸೆಯಬಾರದು. ಇಂತಹ ಸಾಧನ ಸಲಕರಣೆಗಳನ್ನು ಬಳಸಿಕೊಳ್ಳಬೇಕೆಂದರು.
ಸ್ವಾಮಿ ವಿವೇಕಾನಂದ ಯೂತ್ ಮೂವೆಮೆಂಟ್ನ ಖಜಾಂಚಿ ಡಾ. ಕೆ.ಎನ್. ಚಂದ್ರಶೇಖರ್ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವೆಮೆಂಟ್ನಲ್ಲಿ ೮೫೦ಕ್ಕೂ ಹೆಚ್ಚು ಜನರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಹೆಚ್.ಆರ್. ಮುರಳಿಧರ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ನ ಬೋರಯ್ಯ, ವೆಂಕಚಾರಿ, ಅಭಿಷೇಕ್, ಸುನಿತಾ, ಇತರರು ಇದ್ದರು.