ಮಡಿಕೇರಿ, ಮಾ. ೨೬: ಮಡಿಕೇರಿಯ ದೇಚೂರು ಕೊಡವಕೇರಿ ಸಂಘದ ಒತ್ತೋರ್ಮೆ ಕೂಟ ವಾರ್ಷಿಕ ಮಹಾಸಭೆ ಹಾಗೂ ಇದರೊಂದಿಗೆ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮ ತಾ.೨೯ರ ಶುಕ್ರವಾರ ನಡೆಯಲಿದೆ. ಅಂದು ಬೆ.೯ ರಿಂದ ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಮೂವೆರ ಕೆ. ಜಯರಾಮ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಬೆಳಿಗ್ಗೆ ಕಾವೇರಿ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ೧೧.೩೦ ರಿಂದ ಸಭಾ ಕಾರ್ಯಕ್ರಮ ಜರುಗಲಿದೆ.

ಮುಖ್ಯ ಅತಿಥಿಗಳಾಗಿ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ ಹಾಗೂ ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಅವರು ಪಾಲ್ಗೊಳ್ಳಲಿದ್ದಾರೆ. ಸನ್ಮಾನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಜನಪದ ಪ್ರದರ್ಶನಗಳೊಂದಿಗೆ ಕಾರ್ಯಕ್ರಮ ಜರುಗಲಿರುವುದಾಗಿ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.