ಗುಡ್ಡೆಹೊಸೂರು, ಮಾ. ೨೭: ಇಲ್ಲಿನ ಬಿ.ಜೆ.ಪಿ. ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಬಿ.ಎನ್. ಶಶಿಕುಮಾರ್ ಮತ್ತು ಉಪಾಧ್ಯಕ್ಷರಾಗಿ ನವೀನ್ (ತಮ್ಮಯ್ಯ) ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಜಿಲ್ಲಾ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಉಪಾಧ್ಯಕ್ಷ ಮನುಕುಮಾರ್ ರೈ, ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ಮಂಡಲ ಅಧ್ಯಕ್ಷ ಗೌತಮ್, ಮಂಡಲ ಉಪಾಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪುಷ್ಪ ನಾಗೇಶ್, ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಡಾಟಿ, ಮಂಡಲ ಕಾರ್ಯದರ್ಶಿ ಕುಡೆಕಲ್ ನಿತ್ಯಾನಂದ, ಎಸ್‌ಸಿ ಮೋರ್ಚಾದ ತಾಲೂಕು ಕಾರ್ಯದರ್ಶಿ ಪ್ರವೀಣ್, ಎಸ್‌ಸಿ ಮೋರ್ಚಾದ ಅಧ್ಯಕ್ಷ ಜಗದೀಶ್, ಯುವ ಮೋರ್ಚಾದ ಮೋಹಿತ್, ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭ ಬಿ.ಬಿ. ಭಾರತೀಶ್ ಮಾತನಾಡಿ, ದೇಶದಲ್ಲಿ ಮತ್ತೆ ಮೋದಿ ಅವರನ್ನು ಪ್ರಧಾನಿ ಮಾಡಲು ಎಲ್ಲಾ ಒಟ್ಟುಗೂಡಿ ಕೆಲಸ ಮಾಡುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು.