ಮಡಿಕೇರಿ, ಮಾ. ೨೮: ಕಾಂತಬೈಲು-ದಬ್ಬಡ್ಕ, ಚೆಂಬು ಗ್ರಾಮದ ಶ್ರೀರಾಮ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಶ್ರೀರಾಮ ಯುವಕ ಸಂಘದ ಮಹಾಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಘದ ನಿಕಟಪೂರ್ವ ಅಧ್ಯಕ್ಷ ಗಿರೀಶ್ ಹೊಸೂರು ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ ಆಗಮಿಸಿದ್ದರು. ೨೦೨೪-೨೦೨೫ನೇ ಸಾಲಿಗೆ ನೂತನ ಕಾರ್ಯಕಾರಿ ಮಂಡಳಿಯನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಚರಣ ಹೊಸೂರು, ಕಾರ್ಯದರ್ಶಿಯಾಗಿ ರಕ್ಷಿತ್ ಕುಡೆಕಲ್ಲು ಹಾಗೂ ಖಜಾಂಚಿಯಾಗಿ ಸಚಿನ್ ಕೊಲ್ಚಾರ್ ಅವರನ್ನು ಆಯ್ಕೆ ಮಾಡಲಾಯಿತು. ಮುಖ್ಯ ಅತಿಥಿಯಾಗಿದ್ದ ಪಿ.ಪಿ. ಸುಕುಮಾರ್ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಕಾರ್ಯದರ್ಶಿ ಅಜಿತ್ ಪನೆಡ್ಕ ಸ್ವಾಗತಿಸಿ, ವಂದಿಸಿದರು. ಪ್ರಜ್ವಲ್ ಬೊಳ್ತಾಜೆ ನಿರೂಪಣೆ ಮಾಡಿದರು.