ಕುಶಾಲನಗರ, ಮಾ. ೨೮: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜಿಲ್ಲೆಗೆ ಆಗಮಿಸಿದ ಸಂದರ್ಭ ಕುಶಾಲನಗರ ಗಣಪತಿ ದೇವಾಲಯ ಬಳಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆತ್ಮೀಯವಾಗಿ ಬರಮಾಡಿಕೊಂಡರು. ಸಂಸದ ಪ್ರತಾಪ್ ಸಿಂಹ, ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ಜೊತೆಗೆ ಬಂದ ವಿಜಯೇಂದ್ರ ಅವರನ್ನು ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮತ್ತಿತರರು ಸ್ವಾಗತಿಸಿದರು. ನಂತರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ೨೮ ಕ್ಷೇತ್ರಗಳ ಗೆಲುವು ನಿಶ್ಚಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಟಿಕೆಟ್ ಹಂಚಿಕೆಯ ಸಂದರ್ಭ ಸೃಷ್ಟಿಯಾಗಿರುವ ಆಂತರಿಕ ಗೊಂದಲಗಳು ಬಗೆಹರಿಯಲಿವೆ ಎಂದು ಹೇಳಿದರು. ಈ ಸಂದರ್ಭ ಬಿಜೆಪಿ ತಾಲೂಕು ಅಧ್ಯಕ್ಷ ಗೌತಮ್, ಕುಶಾಲನಗರ ಮಂಡಲ ಅಧ್ಯಕ್ಷ ಎಂ.ಎA. ಚರಣ್, ಪುರಸಭೆ ಪ್ರತಿನಿಧಿಗಳು ಪಕ್ಷದ ಪ್ರಮುಖರು ಕಾರ್ಯಕರ್ತರು ಇದ್ದರು.

ಸುಂಟಿಕೊಪ್ಪ

ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸುಂಟಿಕೊಪ್ಪ ಬಿಜೆಪಿ ಕಾರ್ಯ ಕರ್ತರಿಂದ ಸ್ವಾಗತ ಕೋರಲಾಯಿತು.

ಪಟ್ಟಣದ ರಾಷ್ಟಿçÃಯ ಹೆದ್ದಾರಿ ಕನ್ನಡ ವೃತ್ತದ ಬಳಿಯಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಧನು ಕಾವೇರಪ್ಪ ಮತ್ತು ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷ ಹಾಗೂ ಸೋಮವಾರಪೇಟೆ ಮಂಡಳ ಒಬಿಸಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮಾಲಾ ರ್ಪಣೆ ಮಾಡಿ, ಪಟಾಕಿ ಸಿಡಿಸಿ ಜಯಕಾರ ಕೂಗಿದರು. ಈ ಸಂದರ್ಭ ನಾಕೂರು ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ಮಂದೋಡಿ ಜಗನ್ನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಡಾ. ಶಶಿಕಾಂತ್ ರೈ, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಂಕರನಾರಾಯಣ, ಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಬಿ.ಕೆ. ಪ್ರಶಾಂತ್, ವಾಸು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ಸುಂಟಿಕೊಪ್ಪ ಗ್ರಾ.ಪಂ. ಸದಸ್ಯ ಬಿ.ಎಂ. ಸುರೇಶ್, ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಬಿ.ಐ. ಸಭವಾನಿ, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಲಾವತಿ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ. ಮೋಹನ್, ೭ನೇ ಹೊಸಕೋಟೆ ಗ್ರಾ.ಪಂ. ಮಾಜಿ ಅಧ್ಯಕ್ಷ ರಮೇಶ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.