ಚೆಯ್ಯಂಡಾಣೆ, ಏ. ೧೫: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಕೇರಿ ಹಾಗೂ ಚೇಲಾವರದಲ್ಲಿ ಕಾಡಾನೆಗಳ ಹಿಂಡು ತೋಟಗಳಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ಹಾನಿಪಡಿಸುತ್ತಿದೆ. ಕೊಕೇರಿ ಗ್ರಾಮದ ಮಚ್ಚಂಡ ಸುಮತಿ ಕುಂಞಪ್ಪ, ಚೇಲಾವರ ಗ್ರಾಮದ ಮುಂಡಿಯೋಳAಡ ಮಿಟ್ಟು ಅಪ್ಪಯ್ಯ ಹಾಗೂ ಮತ್ತಿತರರ ತೋಟಗಳಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡು ಕಾಫಿ, ಬಾಳೆ, ಅಡಿಕೆ, ಒಳ್ಳೆಮೆಣಸು ಗಿಡಗಳನ್ನು ತುಳಿದು ನಾಶ ಪಡಿಸಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.

ಕೂಲಿ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಕಾಡಾನೆ ತೋಟಗಳಿಗೆ ನುಸುಳದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು, ಜೀವ ಹಾನಿ ಸಂಭವಿಸುವ ಮುನ್ನ ಎಚ್ಚೆತ್ತುಕೊಳ್ಳಬೇಕು. ನಷ್ಟ ಹೊಂದಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.