ಕರಿಕೆ, ಏ. ೧೭: ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಅವರು ಜಿಲ್ಲೆಯ ಗಡಿ ಕರಿಕೆ ಚೆಂಬೇರಿ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಲ್ಲಿನ ಸಿಬ್ಬಂದಿಗಳಿಗೆ ಕಲ್ಪಿಸಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು. ನಂತರ ನಕ್ಸಲ್ ಪೀಡಿತ ಪ್ರದೇಶವಾದ ಮುಂಡ್ರೋಟ್‌ಗೆ ಭೇಟಿ ನೀಡಿ ಅಲ್ಲಿನ ಅರಣ್ಯ ಕಛೇರಿ ಸಿಬ್ಬಂದಿ ಹಾಗೂ ಹಾಡಿಯ ಜನರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಏನಾದರೂ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಗಮನಕ್ಕೆ ತರುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಭಾಗಮಂಡಲ ಠಾಣಾಧಿಕಾರಿ ಶೋಭಾ ಲಮಾಣಿ ಉಪಸ್ಥಿತರಿದ್ದರು.