ಮಡಿಕೇರಿ, ಏ. ೧೭: ಸಿವಿಲ್ ಸರ್ವಿಸ್ ಪರೀಕ್ಷೆ ಬಗ್ಗೆ ವೀರಾಜಪೇಟೆ ದಂತ ವೈದ್ಯಕೀಯ ಕಾಲೇಜಿನಲ್ಲಿ ಎ.ಕೆ ಸುಬ್ಬಯ್ಯ-ಪೊನ್ನಮ್ಮ ದತ್ತಿನಿಧಿ ವತಿಯಿಂದ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದೆ. ತಾ.೧೯ ರಂದು ಸಂಜೆ ೩ ಗಂಟೆಗೆ ಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ಆಸಕ್ತ ಪದವಿ ಶಿಕ್ಷಣ ಮುಗಿಸಿರುವ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ. ಸಿವಿಲ್ ಸರ್ವಿಸ್ ಪರೀಕ್ಷೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಇರುವ ಪ್ರಶ್ನೆಗಳಿಗೆ 'ನಮ್ಮ ಕೆ.ಪಿ.ಎಸ್.ಸಿ' ಸಂಸ್ಥೆ ಸ್ಥಾಪಕ ಅರ್ಜುನ್ ಬೋಪಣ್ಣ ಅವರ ಮಾರ್ಗದರ್ಶನದಲ್ಲಿ ಪ್ರಶ್ನೋತ್ತರ ಕಾರ್ಯಾಗಾರ ನಡೆಯಲಿದೆ.