ಮಡಿಕೇರಿ, ಏ. ೨೩: ಪೆರಾಜೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಈ ಸಂಬAಧ ಇಬ್ಬರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ನಿನ್ನೆ ಸಂಜೆ ಗೌತಮ್ ಚುನಾವಣಾ ಪ್ರಚಾರ ಕಾರ್ಯ ನಡೆಸಿ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಕೋಟೆ ಪೆರಾಜೆ ಬಸ್ ಸ್ಟಾಪ್ ಬಳಿ ಪೆರಾಜೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಪೆರಾಜೆ ಗ್ರಾಮ ಪಂಚಾಯಿತಿ ಸದಸ್ಯ ಸುಭಾಶ್ ಚಂದ್ರ ಹಾಗೂ ಬಿಜೆಪಿ ಮುಖಂಡ ಮಹಾಬಲ ಎಂಬುವರುಗಳು ಅಡ್ಡ ಹಾಕಿ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ಗೌತಮ್ ದೂರು ನೀಡಿದ್ದಾರೆ.

ಮಡಿಕೇರಿ ಗ್ರಾಮಾಂತರ ಪೊಲೀಸರು ಆರೋಪಿಗಳಾದ ಸುಭಾಷ್ ಚಂದ್ರ ಹಾಗೂ ಮಹಾಬಲ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಕಾAಗ್ರೆಸ್ ಮುಖಂಡರಾದ ತೆನ್ನಿರ ಮೈನಾ, ಹೊಸೂರು ಸೂರಜ್, ಪೆರುಮಂಡ ಮನು ಸೇರಿದಂತೆ ಕಾಂಗ್ರೆಸ್ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಈ ಘಟನೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಖಂಡಿಸಿದ್ದು, ಕೊಡಗಿನಲ್ಲಿ ಬಿಜೆಪಿಯವರು ಮನೆ ಮನೆಗೆ ತೆರಳಿ ಮತ ಕೇಳುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.