ಚೆಯ್ಯಂಡಾಣೆ, ಏ. ೨೪: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ತೋಟದೊಳಗೆ ನುಗ್ಗಿ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ನಾಪೋಕ್ಲು ಕೊಳಕೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ.

ನಾಪೋಕ್ಲಿನಿಂದ ಕೊಳಕೇರಿಗೆ ತೆರಳುವ ಮುಖ್ಯ ರಸ್ತೆಯ ಕೋಟೇರಿ ಎಂಬಲ್ಲಿ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಆಲ್ಟೊ ಕಾರು ರಸ್ತೆ ಬದಿಯ ತೋಟದೊಳಗೆ ನುಗ್ಗಿದೆ. ಕಾರಿನ ಚಾಲಕ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ತೋಟದೊಳಗಿದ್ದ ಕಾರನ್ನು ಕ್ರೆöÊನ್ ಮೂಲಕ ಹೊರ ತೆಗೆಯಲಾಯಿತು.