ಮಡಿಕೇರಿ, ಏ. ೨೪: ಖಾಸಗಿ ಬಸ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸಮೀಪದ ಮೇಕೇರಿಯ ಗೌರಿಶಂಕರ ದೇವಾಲಯ ಸಮೀಪ ನಡೆದಿದೆ.
ಮಡಿಕೇರಿ ನಾಪೋಕ್ಲು ಅಯ್ಯಂಗೇರಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವೀರಾಜಪೇಟೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಕಾರು ಚಾಲಕ ಟಿ.ಕೆ. ಹರೀಶ್ ಎಂಬವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.