ಮಡಿಕೇರಿ, ಏ. ೨೪: ನಗರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ನಗರದ ಚೌಡೇಶ್ವರಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಕಾರ್ಯಕರ್ತರೊಡನೆ ರೋಡ್ ಶೋ ನಡೆಸಿ ಪ್ರಚಾರದಲ್ಲಿ ತೊಡಗಿಸಿಕೊಂಡರು. ಇವರಿಗೆ ಕನ್ನಡ ಚಿತ್ರರಂಗದ ಹೆಸರಾಂತ ನಟಿ, ಮಾಜಿ ಎಂ.ಎಲ್.ಸಿ. ತಾರಾ ಅನುರಾಧ ಸಾಥ್ ನೀಡಿದರು. ಮಹದೇಪೇಟೆ ಯಿಂದ ಇಂದಿರಾಗಾAಧಿ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ವೃತ್ತದ ತನಕ ಮೆರವಣಿಗೆ ನಡೆಸಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್, ಎಲ್ಲೆಡೆ ನೀರಿಕ್ಷೆಗೆ ಮೀರಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಮ್ಮ ಪರ ಫಲಿತಾಂಶ ಬರುವ ವಿಶ್ವಾಸವಿದೆ ಎಂದರು.

ಚಿತ್ರನಟಿ ತಾರಾ ಅನುರಾಧ ಮಾತನಾಡಿ, ಎಲ್ಲೆಡೆ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ಇದೆ. ಮತ್ತೊಮ್ಮೆ ಮೋದಿ ಎಂಬ ಕೂಗು ಕೇಳಿ ಬರುತ್ತಿದೆ. ಯದುವಂಶದ ಮಹಾರಾಜ ಯದುವೀರ ಅವರ ಪರ ಪ್ರಚಾರಕ್ಕೆ ಬಂದಿರುವುದು ಗೌರವ ತಂದಿದೆ. ಅವರು ಅತೀ ಹೆಚ್ಚು ಮತಗಳ ಅಂತರದಿAದ ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ. ನಿರೀಕ್ಷೆಗೆ ಮೀರಿ ಬೆಂಬಲ ಪ್ರಚಾರದ ವೇಳೆ ಕಂಡುಬAದಿದೆ ಎಂದರು.

ಪ್ರಚಾರ ವೇಳೆಯಲ್ಲಿ ವಿಧಾನ ಪರಿಷತ್ತು ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ಮಾಜಿ ಶಾಸಕರುಗಳಾದ ಎಂ.ಪಿ. ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ನೆಲ್ಲೀರ ಚಲನ್ ಕುಮಾರ್, ವಿ.ಕೆ. ಲೋಕೇಶ್, ಉಪಾಧ್ಯಕ್ಷ ಮನುಮಂಜುನಾಥ್, ಕಾಂಗೀರ ಸತೀಶ್ ವಕ್ತಾರರಾದ ಬಿ.ಕೆ. ಅರುಣ್ ಕುಮಾರ್, ತಳೂರು ಕಿಶೋರ್ ಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ರೈತ ಮೋರ್ಚಾ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಹಿಂದುಳಿದ ಮೋರ್ಚಾದ ಜಿಲ್ಲಾಧ್ಯಕ್ಷ ಅಫ್ರು ರವೀಂದ್ರ, ನಗರಾಧ್ಯಕ್ಷ ಉಮೇಶ್ ಸುಬ್ರಮಣಿ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಕಾರ್ಯದರ್ಶಿ ಕವನ್ ಕಾವೇರಪ್ಪ, ಪಟ್ಟಡ ರೀನಾ ಪ್ರಕಾಶ್, ಮಾಪಂಗಡ ಯಮುನಾ ಚಂಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.