ಸೋಮವಾರಪೇಟೆ, ಏ. ೨೪: ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿಯೂ ಈ ಬಾರಿ ನದಿ, ಕೆರೆಗಳು ಬತ್ತಿ ಹೋಗಿದ್ದು, ನೀರಿಗಾಗಿ ಹಾಹಾಕಾರ ಆರಂಭವಾಗಿ ರುವುದರಿಂದ ಕೊಡಗು, ಹಾಸನ ಮಠಾಧಿಪತಿಗಳ ಪರಿಷತ್ತಿನ ಸ್ವಾಮೀಜಿಗಳು ಮಳೆಗಾಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಶಾಂತಮಲ್ಲಿಕಾರ್ಜುನ ದೇವರ ಮೊರೆ ಹೋಗಿ ವಿಶೇಷ ಪೂಜೆ ಸಲ್ಲಿಸಿದರು. ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟತಪ್ಪಲಲ್ಲಿ ಇರುವ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಎರಡು ಜಿಲ್ಲೆಗಳ ಸ್ವಾಮೀಜಿಗಳು, ವೀರಾಜಪೇಟೆ ಅರಮೇರಿ-ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ ನೇತೃತ್ವದಲ್ಲಿ ದೇವರಿಗೆ ರುದ್ರಾಭಿಷೇಕ, ಅಷ್ಟೋತ್ತರ, ಅರ್ಚನೆಯೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ, ದಾಸೋಹ ನಡೆಯಿತು. ಅರ್ಚಕರುಗಳಾದ ನಂದೀಶ್ ಶಾಸ್ತಿç, ಮೋಹನಮೂರ್ತಿ ಶಾಸ್ತಿç ಹಾಗೂ ಸೋಮಶೇಖರ ಶಾಸ್ತಿçಗಳಿಂದ ಪೂಜಾ ವಿಧಿವಿಧಾನಗಳು ನೆರವೇರಿತು.

ಈ ಸಂದರ್ಭ ಅರಮೇರಿ ಶ್ರೀಗಳು ಮಾತನಾಡಿ, ಈ ಭಾಗದ ಜನತೆಯ ಮನಸ್ಸಿನಲ್ಲಿ ನೆಲೆನಿಂತಿರುವ ಶಕ್ತಿವಂತ ದೇವಾಲಯ ಪುಷ್ಪಗಿರಿ ಶಾಂತಮಲ್ಲಿಕಾರ್ಜುನ ದೇವಾಲಯವಾಗಿದೆ. ಇಲ್ಲಿನ ಅಕ್ಕಪಕ್ಕದ ಜನರು ರೈತಾಪಿ ವರ್ಗದವರು. ಪ್ರತಿವರ್ಷ ಇಲ್ಲಿಗೆ ಆಗಮಿಸಿ ಬೆಟ್ಟಕ್ಕೆ ಹತ್ತಿ ಪೂಜೆ ಸಲ್ಲಿಸುವ ವಾಡಿಕೆ ನಡೆದುಕೊಂಡು ಬಂದಿದೆ. ಈ ಬಾರಿ ವಿಶೇಷವಾಗಿ ಕೊಡಗಿ ನಲ್ಲಿಯೂ ಬೇಸಿಗೆಯ ಧಗೆ ಹೆಚ್ಚಿದೆ. ಮಳೆ ವಿಳಂಬವಾಗಿ ಜನಜೀವನ ಕಷ್ಟಕರವಾಗಿದೆ. ಈ ಹಿನ್ನೆಲೆ ಕೊಡಗು-ಹಾಸನ ಮಠಾಧೀಶರ ಪರಿಷತ್ತು ವತಿಯಿಂದ ಸ್ವಾಮೀಜಿಗಳು ದೇವಾಲಯಕ್ಕೆ ಆಗಮಿಸಿ ಶಾಂತಮಲ್ಲಿಕಾರ್ಜುನ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿದ್ದೇವೆ ಎಂದರು.

ಈ ಸಂದರ್ಭ ಮಠಾಧಿಪತಿಗಳ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಕಾರ್ಯದರ್ಶಿ ಕಿರಿಕೂಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ತಪೋಕ್ಷೇತ್ರ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಕಲ್ಲಳ್ಳಿ ಮಠದ ಶ್ರೀ ರುದ್ರಮುನಿ ಸ್ವಾಮೀಜಿ, ಚಂಗಡಹಳ್ಳಿ ಮಠದ ಶ್ರೀ ಬಸವ ಮಹಾಂತ ಸ್ವಾಮೀಜಿ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟಿçÃಯ ಸಂಘಟನಾ ಕಾರ್ಯದರ್ಶಿ ಎಸ್. ಮಹೇಶ್, ರಾಜ್ಯ ಸಂಚಾಲಕ ಎ.ಎಸ್. ಮಲ್ಲೇಶ, ತಾಲೂಕು ಅಧ್ಯಕ್ಷ ಹಣಕೊಡು ಜಯರಾಜ್, ಅಕ್ಕನ ಬಳಗದ ಕಾರ್ಯದರ್ಶಿ ಮಾಯಾ ಗಿರೀಶ್, ದೇವಾಲಯ ಆಡಳಿತ ಮಂಡಳಿ ಸದಸ್ಯ ಗಣಪತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.