ಮಡಿಕೇರಿ, ಏ .೨೪ : ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ದಿ.ಸಿ.ವಿ.ಶಂಕರ್ ಸ್ವಾಮಿ ಸ್ಮರಣಾರ್ಥ ಇಲ್ಲಿನ ಜ.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಚಿತ ಬೇಸಿಗೆ ತರಬೇತಿ ಶಿಬಿರದ ಶಿಬಿರಾರ್ಥಿಗಳಿಗೆ ಅಥ್ಲೆಟಿಕ್ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಪುಟಾಣಿಗಳಿಂದ ಹಿಡಿದು ೧೬ ವರ್ಷದವರೆಗಿನ ಮಕ್ಕಳಿಗೆ ೫೦, ೭೫, ೧೦೦, ೨೦೦, ೪೦೦, ೮೦೦ ಮೀಟರ್‌ವರೆಗೆ ಓಟದ ಸ್ಪರ್ಧೆ ನಡೆಸಲಾಯಿತು. ನೂರಕ್ಕೂ ಅಧಿಕ ಶಿಬಿರಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಶಿಬಿರದ ಸಮಾರೋಪದಂದು ಬಹುಮಾನ ವಿತರಣೆ ಮಾಡಲಾಗುವದು. ಅಥ್ಲೆಟಿಕ್ಸ್ ತರಬೇತುದಾರರಾದ ತಿಲಕ್, ಎಸ್.ಟಿ.ವೆಂಕಟೇಶ್, ಹರೇಂದ್ರ ಅವರುಗಳು ಕ್ರೀಡಾಕೂಟ ನಡೆಸಿಕೊಟ್ಟರು. ಶಿಬಿರದ ಸಂಚಾಲಕ ಬಾಬು ಸೋಮಯ್ಯ, ತರಬೇತುದಾರರುಗಳಾದ ಬೊಪ್ಪಂಡ ಶಾಂ ಪೂಣಚ್ಚ, ಗಣೇಶ್, ಕುಡೆಕಲ್ ಸಂತೋಷ್, ಲೋಕೇಶ್ ನಾಯ್ಡು ಇದ್ದರು.

ಇಂದು ಹಾಕಿ

ಶಿಬಿರದಲ್ಲಿ ಹಾಕಿ ತರಬೇತಿ ಪಡೆಯುತ್ತಿರುವ ಕ್ರೀಡಾರ್ಥಿಗಳಿಗೆ ತಾ.೨೫ರಂದು (ಇಂದು) ಭಾರತೀಯ ಕ್ರೀಡಾ ಪ್ರಾಧಿಕಾರದ ಟರ್ಫ್ ಮೈದಾನದಲ್ಲಿ ಹಾಕಿ ಪಂದ್ಯಾವಳಿ ನಡೆಯಲಿದೆ. ಬೆಳಿಗ್ಗೆ ೯ ಗಂಟೆಯಿAದ ಬಾಲಕ-ಬಾಲಕಿಯರ ಜೂನಿಯರ್ ಹಾಗೂ ಸೀನಿಯರ್ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.