ಕೂಡಿಗೆ, ಏ. ೨೫: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೆಗೋಟೆ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾದ ಸಂದರ್ಭ ಕಂದಾಯ ಇಲಾಖೆಯ ಟಾಸ್ಕ್ ಫೋರ್ಸ್ ವತಿಯಿಂದ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಯಿತು.

ಹೆಬ್ಬಾಲೆ ಸಮೀಪದ ಹಳೆಗೋಟೆ ಗ್ರಾಮಕ್ಕೆ ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ ಮತ್ತು ಕಂದಾಯ ಪರಿವೀಕ್ಷಕ ಸಂತೋಷ್, ಗ್ರಾ.ಪಂ. ಅಧ್ಯಕ್ಷ ಅರುಣಾಕುಮಾರಿ ಅವರ ಮನವಿ ಹಿನ್ನೆಲೆ ಭೇಟಿ ನೀಡಿ ನೀರಿನ ಸಮಸ್ಯೆಯನ್ನು ಪರಿಶೀಲನೆ ನಡೆಸಿ ಬದಲಿ ವ್ಯವಸ್ಥೆ ಮತ್ತು ದುರಸ್ತಿಗೊಂಡಿರುವ ಕೊಳವೆ ಬಾವಿಯನ್ನು ಸರಿಪಡಿಸಿ, ಗ್ರಾಮಕ್ಕೆ ಸಮರ್ಪಕವಾಗಿ ನೀರಿನ ಸರಬರಾಜು ಮಾಡಲು ಮುಂದಾಗುವAತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು.

ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾಕುಮಾರಿ, ಪರಿವೀಕ್ಷಕ ಸಂತೋಷ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.