ಮಡಿಕೇರಿ, ಏ. ೨೫: ಕೊಡವ ಕುಟುಂಬಗಳ ನಡುವಿನ ೨೪ನೇ ಹಾಕಿ ಹಬ್ಬ “ಕುಂಡ್ಯೋಳAಡ ಹಾಕಿ ಕಾರ್ನಿವಲ್ ೨೦೨೪” ರ ಅಂತಿಮ ಪಂದ್ಯಾಟ ಮತ್ತು ಸಮಾರೋಪ ಸಮಾರಂಭ ತಾ.೨೮ ರಂದು ನಾಪೋಕ್ಲುವಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ರೀಡಾಕೂಟ ಸಂಚಾಲಕ ಕುಂಡ್ಯೋಳAಡ ದಿನೇಶ್ ಕಾರ್ಯಪ್ಪ ಈ ಪ್ರಯುಕ್ತ ತಾ. ೨೭ರಂದು ಬೆಳಿಗ್ಗೆ ೭ ಗಂಟೆಗೆ ಕಕ್ಕಬ್ಬೆಯಿಂದ ನಾಪೋಕ್ಲುವರೆಗೆ ಕೊಡವ ಕುಟುಂಬಗಳ ನಡುವೆ ೨.೫೦ x ೪ ಕಿ.ಮೀ ದೂರದ ಓಟದ ಸ್ಪರ್ಧೆ “ಫ್ಯಾಮಿಲಿ ರಿಲೇ” ನಡೆಯಲಿದೆ. ಒಂದು ಕುಟುಂಬ ತಂಡದಲ್ಲಿ ಓರ್ವ ಮಹಿಳೆ ಸೇರಿ ನಾಲ್ವರು ಪಾಲ್ಗೊಳ್ಳಬಹುದಾಗಿದೆ. ವಿಜೇತರಿಗೆ ಮೊದಲ ಬಹುಮಾನ ರೂ.೫೦ ಸಾವಿರ, ದ್ವಿತೀಯ ಬಹುಮಾನ ೩೦ ಸಾವಿರ ಹಾಗೂ ತೃತೀಯ ೨೦ ಸಾವಿರ ರೂ. ನೀಡಲಾಗುವುದು. ಸ್ಪರ್ಧಿಗಳು ಅಂದು ಬೆಳಿಗ್ಗೆ ೬ ಗಂಟೆಗೆ ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಹಾಜರಿರಬೇಕು. ನೋಂದಣಿಗೆ ತಾ.೨೬ ಬೆಳಿಗ್ಗೆ ೧೧ ಗಂಟೆಯವರೆಗೆ ಕಾಲಾವಕಾಶವಿದ್ದು, ಸ್ಪರ್ಧಿಗಳು ಮೊ. ಸಂಖ್ಯೆ ೯೧೪೮೯ ೩೦೭೬೦ ನ್ನು ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

“ದೊಡ್ಡ ಮೀಸೆ ಮತ್ತು ಉದ್ದ ಜಡೆಯ ಪ್ರದರ್ಶನ”ದ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದ್ದು, ಸ್ಪರ್ಧಿಗಳು ಮೊ.ಸಂಖ್ಯೆ ೯೪೪೮೮ ೩೯೯೮೮ ನ್ನು ಸಂಪರ್ಕಿಸಬಹುದಾಗಿದೆ. ತಾ.೨೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಅಂತಿಮ ಪಂದ್ಯಾವಳಿಯ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಪಾಲ್ಗೊಳ್ಳಲಿದ್ದು, ಕೊಡವ ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ ಉಪಸ್ಥಿತರಿರುವರು.

ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಐಆರ್‌ಎಸ್ ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಡಾ.ಕೊಟ್ಟಂಗಡ ಪೆಮ್ಮಯ್ಯ, ಹೈದರಾಬಾದ್ ವಿದೇಶಿ ತನಿಖಾ ಘಟಕದ ಉಪ ನಿರ್ದೇಶಕ ಮುಕ್ಕಾಟಿರ ಪುನೀತ್ ಕುಟ್ಟಯ್ಯ, ನಾರಾಯಣ ಆರೋಗ್ಯ ಸಮೂಹದ ಮುಖ್ಯ ವೈದ್ಯಕೀಯ

(ಮೊದಲ ಪುಟದಿಂದ) ನಿರ್ದೇಶಕ ಡಾ.ಪುಚ್ಚಿಮಾಡ ಎಂ.ಉತ್ತಪ್ಪ , ಸಿ.ಸಿ.ಇಂಡಿಯಾ ಪ್ರವೈಟ್ ಲಿ. ವ್ಯವಸ್ಥಾಪಕ ನಿರ್ದೇಶಕÀ ಕೋಡಂಗಡ ರವಿ ಕರುಂಬಯ್ಯ, ಪಾಂಡAಡ ಲೀಲಾ ಕುಟ್ಟಪ್ಪ, ಒಲಂಪಿಯನ್ ಡಾ. ಅಂಜಪರವAಡ ಬಿ.ಸುಬ್ಬಯ್ಯ, ರಿಪಬ್ಲಿಕ್ ನೆಟ್‌ವರ್ಕ್ನ ಅಧ್ಯಕ್ಷ ಹಾಗೂ ಅಂತರರಾಷ್ಟಿçÃಯ ಉದ್ಯಮಿ ಚೇರಂಡ ಕಿಶನ್, ದೀಪಕ್ ಚೋಪ್ರಾ ಫೌಂಡೇಶನ್ ಸಿಇಒ ಬಲ್ಯಾಟಂಡ ಪೂಣಚ್ಚ ಮಾಚಯ್ಯ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಇಬ್ನಿ ಕೂರ್ಗ್ ವ್ಯವಸ್ಥಾಪಕ ನಿರ್ದೇಶಕ ಕ್ಯಾಪ್ಟನ್ ಸಬಾಸ್ಟಿಯನ್, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ ನ ಪ್ರಧಾನ ವ್ಯವಸ್ಥಾಪಕ ಪೀಟರ್, ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟ್ಟಿರ ಹೇಮಾವತಿ, ಟಾಟಾ ಕಾಫಿ ವ್ಯವಸ್ಥಾಪಕ ನಿರ್ದೇಶಕ ಪಿ.ಎ.ಮಂದಣ್ಣ, ನಾಪೋಕ್ಲು ಕೆಪಿಎಸ್ ಸ್ಕೂಲ್‌ನ ಪ್ರಾಂಶುಪಾಲೆ ಮೇದುರ ವಿಶಾಲ ಕುಶಾಲಪ್ಪ, ಉಪ ಪ್ರಾಂಶುಪಾಲೆ ಎಂ.ಎಸ್. ಶಿವಣ್ಣ, ಕ್ರೀಡಾ ಇಲಾಖೆಯ ಉಪ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ ಪಾಲ್ಗೊಳ್ಳಲಿದ್ದಾರೆ.

ಅತಿಥಿಗಳಾಗಿ ಆರ್.ವಿ.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಪಿ. ಶ್ಯಾಮ್, ಆರ್.ವಿ. ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ.ಡಿ.ಪಿ.ನಾಗರಾಜ್, ಕಾಮಾಕ್ಷಿ ಆಸ್ಪತ್ರೆಯ ಮುಖ್ಯಸ್ಥ ಮಹೇಶ್ ಶೆಣೈ, ಉದ್ಯಮಿ ಕಂಬೆಯAಡ ಶ್ಯಾಮ್ ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ನಂತರ ಅಂತಿಮ ಪಂದ್ಯಾಟ ನಡೆಯಲಿದೆ. ಅಂತಿಮ ಪಂದ್ಯಾಟವನ್ನು ಸುಮಾರು ೨೦ ಸಾವಿರ ಕ್ರೀಡಾಭಿಮಾನಿಗಳು ವೀಕ್ಷಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಅಧ್ಯಕ್ಷ ಕುಂಡ್ಯೋಳAಡ ರಮೇಶ್ ಮುದ್ದಯ್ಯ, ಖಜಾಂಚಿ ವಿಶು ಕರುಂಬಯ್ಯ, ಸದಸ್ಯರುಗಳಾದ ಸುರೇಶ್ ಉತ್ತಪ್ಪ, ಶಂಭು ಪೂಣಚ್ಚ ಹಾಜರಿದ್ದರು.ನಾಳೆ ಸೆಮಿಫೈನಲ್

ತಾ.೨೭ ರಂದು ಶನಿವಾರ ಬೆಳಿಗ್ಗೆ ೧೦.೩೦ ಗಂಟೆಗೆ ನಡೆಯುವ ಸೆಮಿ ಫೈನಲ್ ಪಂದ್ಯಾವಳಿಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚೆಪುö್ಪಡಿರ ಮೊಣ್ಣಪ್ಪ ಪೂಣಚ್ಚ ಹಾಗೂ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ.ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.

ಎರಡನೇ ಪಂದ್ಯದ ಅತಿಥಿಯಾಗಿ ಹಿರಿಯ ಹಾಕಿಪಟು ಡಾ.ಕಲಿಯಾಟಂಡ ಚಿಣ್ಣಪ್ಪ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮೇ.ಜ.ಬಾಚಮಂಡ ಎ.ಕಾರ್ಯಪ್ಪ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಕೊಡವ ಕ್ರೀಡಾಪಟುಗಳು, ಪಂದ್ಯಾವಳಿಯಲ್ಲಿ ಕಾರ್ಯನಿರ್ವಹಿಸಿದ ಅಂಪೈರ್‌ಗಳು, ತಾಂತ್ರಿಕವರ್ಗ, ಪತ್ರಿಕಾ ಕ್ಷೇತ್ರದ ಕೊಡವ ಸಾಧಕರು ಹಾಗೂ ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿ ಗೌರವಿಸಲಾಗುವುದು.