ಮಡಿಕೇರಿ, ಏ. ೨೫: ನಗರದ ವಿದ್ಯಾನಗರದ ಹೊಸ ಕೋರ್ಟ್ ಸಮೀಪದ ಶ್ರೀ ಶಕ್ತಿ ಗಣಪತಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಕೈಂಕರ್ಯಗಳು ನಡೆದವು.

ತಾ. ೨೪ ರಿಂದ ದೈವಿಕ ಕಾರ್ಯಕ್ರಮ ಆರಂಭಗೊAಡಿದ್ದು, ೨೫ ರಂದು ಬೆಳಿಗ್ಗೆ ಗಣಪತಿ ಹೋಮ, ಪ್ರಾಯಶ್ಚಿತ ಹೋಮ, ಹೋಮ ಕಲಶಾಭಿಷೇಕ, ಅನುಜ್ಞಾ ಕಲಶಾ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಭಕ್ತರು ದೈವಿಕ ಕಾರ್ಯದಲ್ಲಿ ಭಾಗಿಯಾದರು. ತಾ. ೨೬ ರಂದು (ಇಂದು) ಬೆಳಿಗ್ಗೆ ೫ ಗಂಟೆಗೆ ಗಣಪತಿ ಹೋಮ, ಬ್ರಹ್ಮ ಕಲಶ ಪೂಜೆ, ಮಿಥುನ ಲಗ್ನದಲ್ಲಿ ಪ್ರತಿಷ್ಠೆ ಕಲಶಾಭಿಷೇಕ, ಮಹಾಪೂಜೆ ನಿತ್ಯ ನೈಮಿತ್ಯ ಪ್ರಾರ್ಥನೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.