ಮಡಿಕೇರಿ, ಮೇ ೩: ವೀರಾಜಪೇಟೆ ವಿದ್ಯುತ್ ಉಪ ಕೇಂದ್ರದಿAದ ಹೊರಹೋಗುವ ಬಿ. ಶೆಟ್ಟಿಗೇರಿ ಫೀಡರ್‌ನ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿಯನ್ನು ನಿರ್ವಹಿಸಬೇಕಿರುವುದರಿಂದ ತಾ. ೪ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬಿ.ಶೆಟ್ಟಿಗೇರಿ, ಬಿಟ್ಟಂಗಾಲ, ವಿ. ಬಾಡಗ, ನಾಂಗಾಲ, ಬಾಳುಗೋಡು ಹಾಗೂ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

* ಶನಿವಾರಸಂತೆ : ಫೀಡರ್‌ಗಳಲ್ಲಿ ತುರ್ತು ನಿರ್ವಹಣೆ ಕೆಲಸ ಹಮ್ಮಿಕೊಂಡಿರುವ ಹಿನ್ನೆಲೆ ತಾ. ೫ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕೊಡ್ಲಿಪೇಟೆ ಪಟ್ಟಣ, ಕ್ಯಾತೆ, ದೊಡ್ಡಕೊಡ್ಲಿ, ಬೆಂಬಳೂರು, ಊರುಗುತ್ತಿ, ಶಾಂತಪುರ, ಸುತ್ತಮುತ್ತಲ ಗ್ರಾಮಗಳು ಮತ್ತು ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಾರಳ್ಳಿ, ಹೆಬ್ಬಾಲೆ, ಹಂಡ್ಲಿ, ಕಿತ್ತೂರು, ತಾಳೂರು, ಸಂಪಿಗೆದಾಳು, ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಚೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

* ಮಡಿಕೇರಿ : ಮಡಿಕೇರಿ ೬೬/೧೧ ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿAದ ಹೊರ ಹೋಗುವ ಭಾಗಮಂಡಲ ಫೀಡರ್‌ನಲ್ಲಿ ಮಳೆಗಾಲದ ಮುಂಜಾಗ್ರತಾ ನಿರ್ವಹಣೆ ನಡೆಸಬೇಕಾಗಿರುವುದರಿಂದ ತಾ. ೪ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೩.೩೦ ಗಂಟೆಯವರೆಗೆ ಬೆಟ್ಟಗೇರಿ, ಚೇರಂಬಾಣೆ, ಭಾಗಮಂಡಲ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಚೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.