ಮಡಿಕೇರಿ, ಆ. ೧೦: ಸಂಘಟಿತ ಸಮಾಜವು ತನ್ನಲ್ಲಿ ಶಕ್ತಿ ಮತ್ತು ಸಾಮರ್ಥ್ಯವನ್ನು ಮೈಗೂಡಿಸಿಕೊಂಡಾಗ ಮಾತ್ರ ಭಾರತವು ವಿಶ್ವಗುರುವಿನ ಸ್ಥಾನ ತಲುಪಲು ಸಾಧ್ಯ ಎಂದು ನಿವೃತ್ತ ಲೆ.ಜ. ಡಾ.ಬಿ.ಎಂ. ಪ್ರಸಾದ್ ಅಭಿಪ್ರಾಯಪಟ್ಟರು.
ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮಡಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನದ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತವು ಜ್ಞಾನ, ಆಧ್ಯಾತ್ಮಿಕತೆ, ಯೋಗ ಮತ್ತು ಕೌಟುಂಬಿಕ ಜೀವನ ಮೌಲ್ಯಗಳ ಪರಂಪರೆಯನ್ನು ಹೊಂದಿರುವ ಸಂಸ್ಕೃತಿಯಾಗಿದ್ದು, ಪ್ರತಿಯೊಬ್ಬ ಭಾರತೀಯನು ತನ್ನಲ್ಲಿ ಜ್ಞಾನ, ಆಧ್ಯಾತ್ಮಿಕ ಶಕ್ತಿ, ಯೋಗ ಶಕ್ತಿಯನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕಾಗಿದೆ. ಕೌಟುಂಬಿಕ ಸಹಬಾಳ್ವೆಯ ಪರಂಪರೆಯನ್ನು ವಿಶ್ವಕ್ಕೆ ಭಾರತ ಕೊಡುಗೆಯಾಗಿ ನೀಡಿದೆ. ಹಿಂದೆ ಭಾರತೀಯರಲ್ಲಿ ಈ ರೀತಿಯ ಶಕ್ತಿ ಸಾಮರ್ಥ್ಯ ಎಲ್ಲವೂ ಇತ್ತು. ನಮ್ಮ ಋಷಿ ಮುನಿಗಳು ಮತ್ತು ಹಿರಿಯರು ಅದನ್ನು ಸಾಬೀತುಪಡಿಸಿದ್ದರು. ಇದನ್ನು ಪ್ರತಿಯೊಬ್ಬ ಭಾರತೀಯರು ಮೈಗೂಡಿಸಿಕೊಂಡಾಗ ಖಂಡಿತವಾಗಿಯೂ ಭಾರತ ವಿಶ್ವಗುರುವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಬೆಂಗಳೂರಿನ ರೂಟ್ಸ್ ಅಂಡ್ ಬ್ರಾಂಚಸ್ ರಿಸರ್ಚ್ ಫೌಂಡೇಶನ್ ಮುಖ್ಯಸ್ಥ ಜಿ.ಆರ್. ಜಗದೀಶ್ ಸ್ವಾತಂತ್ರ್ಯ ಹೋರಾಟದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಐಎನ್ಎ ಮೂಲಕ ಹೊರಾಟವನ್ನು ರೂಪಿಸಿದ್ದರು. ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಸುಭಾಷ್ ಚಂದ್ರ ಬೋಸ್ ನೇಮಕವಾಗಬೇಕಾಗಿತ್ತು. ಆದರೆ ಭಾರತೀಯರ ದುರಂತ; ಅವರನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ತಲೆದೋರಿತು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯವನ್ನು ಉಳಿಸುವ ಸಲುವಾಗಿ ರಾಷ್ಟಿçÃಯ ಸ್ವಯಂಸೇವಕ ಸಂಘ ಪ್ರಾರಂಭವಾಯಿತು, ೨೦೨೫ ಕ್ಕೆ ಸಂಘಕ್ಕೆ ನೂರು ವರ್ಷ ತುಂಬಲಿದೆ. ಸಂಘ ಸ್ಥಾಪನೆ ಆಗದೆ ಇದ್ದಿದ್ದರೆ ಇವತ್ತಿನ ಭಾರತದ ಚಿತ್ರಣವೇ ಬದಲಾಗಿರುತ್ತಿತ್ತು ಎಂದು ವಿಷಾದಿಸಿದರು. ಅವರು ಭಾರತವು ಕಳೆದ ವರ್ಷ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಣೆ ಮಾಡಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬ ಭಾರತೀಯನು ಸ್ವಾತಂತ್ರ್ಯವನ್ನು ಏಕೆ ಕಳೆದುಕೊಂಡಿದ್ದೇವೆ ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು.
ಹಿAದೆ ವಿದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಭಾರತಕ್ಕೆ ಬರುತ್ತಿದ್ದರು. ಆ ಸಂದರ್ಭದಲ್ಲಿ ನಮ್ಮ ದೇಶದ ಜನರು ಜ್ಞಾನಶಕ್ತಿ, ಆಧ್ಯಾತ್ಮಿಕ ಶಕ್ತಿ ಹೊಂದಿದ್ದರು. ವಿದೇಶಿಯರ ಆಕ್ರಮಣದಿಂದಾಗಿ ನಮ್ಮತನವನ್ನು ಕಳೆದುಕೊಂಡ ಪರಿಣಾಮ ನಾವು ನಮ್ಮ ಸ್ವಾತಂತ್ರ್ಯವನ್ನು ಕಳೆದುಕೊಳ್ಳಬೇಕಾಯಿತು. ವಿಶ್ವಕ್ಕೆ ನಾಗರೀಕತೆಯನ್ನು ಕಲಿಸಿದವರು ಭಾರತೀಯರು. ಭಾರತೀಯ ಸಾಂಸ್ಕೃತಿಕ ಪರಂಪರೆ, ಜ್ಞಾನ ಆಧ್ಯಾತ್ಮಿಕತೆಯನ್ನು ಇಡೀ ವಿಶ್ವಕ್ಕೆ ಹಂಚುವ ಕೆಲಸ ಆಗಬೇಕಾಗಿದೆ. ಆ ಮೂಲಕ ವಿಶ್ವವೇ ಒಂದು ಕುಟುಂಬ ಎನ್ನುವ ಮೌಲ್ಯವನ್ನು ಸಾರಿದಾಗ ಭಾರತ ಶಕ್ತಿಶಾಲಿ ಆಗಲಿದ್ದು, ಅಖಂಡ ಭಾರತದ ಸಂಕಲ್ಪ ಸಾಕಾರಗೊಳ್ಳಲಿದೆ ಎಂದು ಹೇಳಿದರು.
ಆದಿಚುಂಚನಗಿರಿ ವಿದ್ಯಾಸಂಸ್ಥೆಯ ಭಜನಾ ಶಿಕ್ಷಕ ರವಿಭೂತನಕಾಡು ಅವರ ತಂಡದಿAದ ದೇಶಭಕ್ತಿ ಗೀತೆಗಳ ಗಾಯನ ನಡೆದರೆ, ಕೊನೆಯಲ್ಲಿ ವಂದೇ ಮಾತರಂ ಹಾಡಿದರು.
(ಮೊದಲ ಪುಟದಿಂದ) ವೇದಿಕೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಯೋಜಕ ಅಜಿತ್, ಮಡಿಕೇರಿ ತಾಲೂಕು ಸಂಯೋಜಕ ದುರ್ಗೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಕೆ.ಕೆ. ಮಹೇಶ್ ಕುಮಾರ್, ಕೆ.ಕೆ. ದಿನೇಶ್ ಕುಮಾರ್, ಶಿವರಾಜ್, ನಂದಕುಮಾರ್, ಚೇತನ್, ಕುಮಾರ್, ತಿಮ್ಮಯ್ಯ, ಬಿ.ಕೆ. ಜಗದೀಶ್, ನಗರಸಭಾ ಸದಸ್ಯರಾದ ಎಸ್.ಸಿ. ಸತೀಶ್, ಅಪ್ಪಣ್ಣ ಹಾಗೂ ಇತರರು ಪಾಲ್ಗೊಂಡಿದ್ದರು. ಹಿಂದೂ ಜಾಗರಣಾ ವೇದಿಕೆ ಮಡಿಕೇರಿ ತಾಲೂಕು ಸಹ ಸಂಯೋ ಜಕ ಶ್ಯಾಮ್ ಸ್ವಾಗತಿಸಿದರೆ, ಜಿಲ್ಲಾ ಸಹ ಸಂಯೋಜಕ ಸುನಿಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.