ವೀರಾಜಪೇಟೆ, ಅ. ೩೦: ವಿದ್ಯಾಸಂಸ್ಥೆಯ ಅಭಿವೃದ್ಧಿಯಲ್ಲಿ ಹಳೆಯ ವಿದ್ಯಾರ್ಥಿಗಳ ಪಾತ್ರ ಮಹತ್ತರ ಎಂದು ವೀರಾಜಪೇಟೆ ಕಾವೇರಿ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಪಟ್ಟಡ ರೀನಾ ಪ್ರಕಾಶ್ ಹೇಳಿದರು.

ಕಾಲೇಜಿನಲ್ಲಿ ಜರುಗಿದ ಹಳೆಯ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರೀನಾ ಪ್ರಕಾಶ್, ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಲು ಹಳೆಯ ವಿದ್ಯಾರ್ಥಿ ಸಂಘವು ಅಗತ್ಯವಾಗಿದೆ. ಹಳೆಯ ವಿದ್ಯಾರ್ಥಿ ಸಂಘದಿAದ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ. ಹಳೆಯ ವಿದ್ಯಾರ್ಥಿಗಳು ವಿದ್ಯಾಸಂಸ್ಥೆಯ ಬೆನ್ನೆಲುಬಿದ್ದಂತೆ ಸಂಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಅವರ ಮೇಲಿದೆ ಎಂದರು. ನಂತರ ಹಳೆ ವಿದ್ಯಾರ್ಥಿ ಸಂಘದಿAದ ಇದುವರೆಗೆ ನಡೆದ ಕಾರ್ಯ ಚಟುವಟಿಕೆಗಳ ವರದಿ ವಾಚಿಸಿದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಬೆನಡಿಕ್ಟ್ ಆರ್. ಸಲ್ಡಾನ ಮಾತನಾಡಿ, ಕಾವೇರಿ ಕಾಲೇಜನ್ನು ಜಗತ್ತಿಗೆ ಪರಿಚಯಿಸುವಂತಹ ಕಾರ್ಯವನ್ನು ಹಳೆಯ ವಿದ್ಯಾರ್ಥಿಗಳು ಮಾಡುತ್ತಿದ್ದಾರೆ. ಹಳೆಯ ವಿದ್ಯಾರ್ಥಿಗಳು ನಮ್ಮ ಈ ವಿದ್ಯಾಸಂಸ್ಥೆಯನ್ನು ಹೊರ ಜಗತ್ತಿಗೆ ಪರಿಚಯಿಸುವ ರಾಯಭಾರಿಗಳು. ಕಾಲೇಜಿನ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡುವಂತಹ ಮಾರ್ಗದರ್ಶಕರು. ಆದರಿಂದ ಹಳೆಯ ವಿದ್ಯಾರ್ಥಿಗಳು ಸಂಸ್ಥೆಯ ಬೆಳವಣಿಗೆಗೆ ಸದಾ ಸಹಕಾರವನ್ನು ನೀಡಬೇಕು ಎಂದರು. ಹಳೆಯ ವಿದ್ಯಾರ್ಥಿಗಳು ವೃತ್ತಿ ಮಾರ್ಗದರ್ಶನ, ಹಣಕಾಸಿನ ನಿರ್ವಹಣೆ ಹಾಗೂ ಕಾಲೇಜು ಒದಗಿಸಿದ ಅವಕಾಶವನ್ನು ಸದ್ಬಳಕೆ ಮಾಡಬೇಕು ಹಾಗೂ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉದ್ಯೋಗ ಆರ್ಥಿಕ ಸ್ವಾವಲಂಬನೆ ಇನ್ನಿತರ ಕ್ಷೇತ್ರಗಳಲ್ಲಿ ಮಾರ್ಗದರ್ಶನವನ್ನು ನೀಡಬೇಕೆಂದರು. ನಂತರ ಹಳೆ ವಿದ್ಯಾರ್ಥಿಗಳಿಗೆ ಮುಕ್ತ ಚರ್ಚೆ ಏರ್ಪಡಿಸಲಾಗಿ ಹಳೆ ವಿದ್ಯಾರ್ಥಿ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಕಾಲೇಜಿನ ಪ್ರಾಂಶುಪಾಲರಾದ ಬೆನಡಿಕ್ಟ್ ಆರ್. ಸಲ್ಡಾನ, ಉಪಾಧ್ಯಕ್ಷರಾಗಿ ವಿದ್ಯಾ ಬಿ.ಟಿ., ಕಾರ್ಯದರ್ಶಿ ಪುಣ್ಯ ಬೆಳ್ಳಿಯಪ್ಪ, ಜಂಟಿ ಕಾರ್ಯದರ್ಶಿಗಳಾಗಿ ಹರೀಶ್ ಹೆಚ್.ಎಂ., ಖಜಾಂಚಿಯಾಗಿ ರೇಷ್ಮಾ ಎ.ಎನ್., ಸದಸ್ಯರುಗಳಾಗಿ ಶಿಲ್ಪ ಕೆ.ಪಿ., ಅಂಮ್ರಿನ್ ತಾಜ್, ಸೋಮಣ್ಣ ಸಿ.ಎಂ., ಮಂಜುಳಾ, ಕರಣ್, ಮಮತಾ, ಲಸಿಕ ಕಾರ್ಯಪ್ಪ, ಗುಲ್ನಾರ್ ಬಾನು ಆಯ್ಕೆಯಾದರು.

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕರಾದ ಗಾಯತ್ರಿ ಕೆ.ಪಿ., ಕಾರ್ಯದರ್ಶಿ ಪ್ರಿಯಾ ಮುದ್ದಪ್ಪ, ಖಜಾಂಚಿ ರಶ್ಮಿ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕöÈತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಾಲೇಜಿನ ಹಳೆಯ ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಜರಿದ್ದರು.