ಮಡಿಕೇರಿ, ನ. ೨೪: ವೀರ ಸೇನಾನಿಗಳಾದ ಫೀ.ಮಾ. ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರುಗಳ ವಿರುದ್ಧವಾಗಿ ಅವಹೇಳನಕಾರಿ ಸಂದೇಶದ ಮೂಲಕ ಅವಮಾನ ಮಾಡಿರುವ ಪ್ರಕರಣವನ್ನು ಮೂರ್ನಾಡು ಕೊಡವ ಸಮಾಜ ಖಂಡಿಸಿದೆ. ಈ ಬಗ್ಗೆ ಸಮಾಜದ ಆಡಳಿತ ಮಂಡಳಿ ಹೇಳಿಕೆ ನೀಡಿದ್ದು, ಆರೋಪಿ ವಕೀಲ ವಿದ್ಯಾಧರ್ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಕೃತ್ಯಕ್ಕೆ ಬೆಂಬಲ ನೀಡಿರುವ ಪ್ರತಿಯೊಬ್ಬರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಯುವ ಸೇನೆ
ಕೊಡಗಿನ ಸೇನಾನಿಗಳ ವಿರುದ್ಧ ಅಪಪ್ರಚಾರ ಆರೋಪದ ಆರೋಪಿಯನ್ನು ಗಡಿಪಾರು ಮಾಡುವಂತೆ ಕೊಡಗು ಯುವ ಸೇನೆ ಒತ್ತಾಯ ಮಾಡಿದೆ.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿರುವುದನ್ನು ಖಂಡಿಸಿ ಗಡಿಪಾರು ಮಾಡುವಂತೆ ಕೊಡಗು ಯುವ ಸೇನೆಯ ಮುಖ್ಯಸ್ಥರಾದ ಕುಲದೀಪ್ ಪೂಣಚ್ಚ ಹಾಗೂ ಸಚಿನ್ ಮಂದಣ್ಣ ಮಾಚಿಟ್ಟಿರ ಆಗ್ರಹಿಸಿದ್ದಾರೆ.
ಒಕ್ಕಲಿಗರ ಸಂಘ ಖಂಡನೆ
ಭಾರತೀಯ ಸೇನೆಗೆ ಅಪಾರ ಶಕ್ತಿಯನ್ನು ತುಂಬಿದ ಮತ್ತು ತಮ್ಮದೇ ಆದ ಕೊಡುಗೆಯನ್ನು ನೀಡಿದ ವಿಶ್ವ ವಿಖ್ಯಾತ ವೀರ ಸೇನಾನಿಗಳಾದ ಫೀ.ಮಾ. ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ.ಮೋಹನ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ಆರೋಪಿಯ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಗಡಿಪಾರು ಮಾಡಬೇಕು. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿ.ಜಿ. ಮೋಹನ್ ಆಗ್ರಹಿಸಿದ್ದಾರೆ.
ಕುಂಬಾರ ಕುಲಾಲ ಸಂಘ ಖಂಡನೆ
ಭಾರತದ ಹೆಮ್ಮೆಯ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಬಗ್ಗೆ ವಾಟ್ಸಾö್ಯಪ್ನಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವವರ ಘಟನೆಯನ್ನು ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘವು ತೀವ್ರವಾಗಿ ಖಂಡಿಸುತ್ತದೆ.
ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಉನ್ನತ ಮಟ್ಟದ ತನಿಖೆ ಕೈಗೊಂಡು ಸಂಬAಧಪಟ್ಟ ಆರೋಪಿಗೆ ಶಿಕ್ಷೆ ವಿಧಿಸಬೇಕೆಂದು ಸಂಘದÀ ಅಧ್ಯಕ್ಷ ಕೆ.ಎ. ಕುಶಾಲಪ್ಪ ಆಗ್ರಹಿಸಿದ್ದಾರೆ.