ವೀರಾಜಪೇಟೆ, ನ. ೨೪: ಸಮೀ ಪದ ಹೆಗ್ಗಳ ಗ್ರಾಮದಲ್ಲಿರುವ ಶ್ರೀ ಗೋಪಾಲ ಕೃಷ್ಣ ದೇವಸ್ಥಾನ ದಲ್ಲಿ ವಾರ್ಷಿಕ ಮಹಾಪೂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ದೇವಸ್ಥಾನದ ಅರ್ಚಕರಾದ ವೇಣುಗೋಪಾಲ್ ಭಟ್ ಪೂಜಾ ಸೇವೆಯನ್ನು ನೆರವೇರಿಸಿದರು. ಬೆಳಿಗ್ಗೆಯಿಂದಲೇ ಧಾರ್ಮಿಕ ವಿಧಿ ವಿಧಾನ ನೆರವೇರಿದವು. ವಿಶೇಷ ಪೂಜೆ, ಅಲಂಕಾರ ಸೇವೆ, ಹಾಲಿನ ಹಾಗೂ ಸೀಯಾಳ ಅಭಿಷೇಕ ಸೇವೆಗಳು ನಡೆದವು.
ಭಕ್ತರು ಹರಕೆಯ ಹಸು ಮತ್ತು ಕರುವಿನ ಮೂರ್ತಿಗಳನ್ನು ಸಮರ್ಪಿಸಿದರು. ವಿಶೇಷ ಪ್ರಾರ್ಥನೆಯ ಬಳಿಕ ಮಹಾ ಮಂಗಳಾರತಿ ಸೇವೆ ನಡೆಯಿತು. ತದನಂತರ ಭಕ್ತಾದಿಗಳಿಗೆ ಅನ್ನ ಸಂತರ್ಪಣಾ ಸೇವೆ ನಡೆಯಿತು.
ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು. ತದನಂತರ ಆಡಳಿತ ಮಂಡಳಿ ಸಭೆ ನಡೆಯಿತು.