ಬೆಂಗಳೂರು, ನ. ೨೩: ರಾಜ್ಯದ ಎಲ್ಲ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ಸಿ.ಪಿ. ಯೋಗೇಶ್ವರ್, ಶಿಗ್ಗಾವಿಯಲ್ಲಿ ಯಾಸೀರ್ ಅಹಮದ್ ಖಾನ್ ಪಠಾಣ್ ಮತ್ತು ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಜಯಭೇರಿ ಮೊಳಗಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಎನ್‌ಡಿಎ (ಬಿಜೆಪಿ-ಜೆಡಿಎಸ್) ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್‌ನ ಸಿ.ಪಿ. ಯೋಗೇಶ್ವರ್ ೨೫,೩೫೭ ಮತಗಳ ಅಂತರದಿAದ ಸೋಲಿಸುವ ಮೂಲಕ ಭರ್ಜರಿ ಗೆಲುವು ದಾಖಲಿಸಿದರು. ಸಿ.ಪಿ. ಯೋಗೇಶ್ವರ್ ೧,೧೨,೩೮೮ ಮತಗಳು, ಎನ್‌ಡಿಎ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ೮೭,೦೩೧ ಮತಗಳನ್ನು ಪಡೆದರು. ಬಿಜೆಪಿಯಿಂದ ಟಿಕೆಟ್ ಸಿಗದಿದ್ದರಿಂದ ಯೋಗೇಶ್ವರ್ ಕಾಂಗ್ರೆಸ್ ಸೇರಿ ಸ್ಪರ್ಧಿಸಿದ್ದರು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಹಮದ್ ಖಾನ್ ಪಠಾಣ್ ಜಯಭೇರಿ ಬಾರಿಸಿದ್ದಾರೆ. ಇದರೊಂದಿಗೆ `ಕಮಲ'ದ ಭದ್ರಕೋಟೆಯಲ್ಲಿ ಈ ಬಾರಿ 'ಕೈ' ಬಾವುಟ ಹಾರಿಸಿದೆ. ನಾಲ್ಕು ಅವಧಿಯಲ್ಲಿ ಬಿಜೆಪಿ ತೆಕ್ಕೆಯಲ್ಲಿದ್ದ ಕ್ಷೇತ್ರವನ್ನು ಕಾಂಗ್ರೆಸ್‌ನ ಯಾಸೀರ್ ಅಹಮದ್ ಖಾನ್ ಪಠಾಣ್ ತಮ್ಮ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿ ಯಾಗಿದ್ದಾರೆ. ಅವರು ೧೩,೪೪೮ ಮತಗಳ ಅಂತರದಿAದ ಗೆಲುವು ತನ್ನದಾಗಿಸಿಕೊಂಡರು. ಪಠಾಣ್ ಅವರು ೧,೦೦,೫೮೭ ಮತ ಪಡೆದರೆ, ಸಂಸದ

(ಮೊದಲ ಪುಟದಿಂದ) ಬಸವರಾಜ ಬೊಮ್ಮಾಯಿ ಅವರ ಪುತ್ರ ಬಿಜೆಪಿಯ ಅಭ್ಯರ್ಥಿ ಭರತ್ ಬೊಮ್ಮಾಯಿ ೮೬,೯೬೦ ಮತ ಪಡೆದು ಪರಾಭವಗೊಂಡಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ೯೩,೬೧೬ ಮತ ಪಡೆದರೆ, ಬಿಜೆಪಿಯ ಬಂಗಾರ ಹನುಮಂತ ೮೩,೯೬೭ ಮತಳಿಸಿದ್ದಾರೆ. ೯೬೪೯ ಮತಗಳ ಅಂತರದಲ್ಲಿ ಅನ್ನಪೂರ್ಣ ಗೆಲವು ಸಾಧಿಸಿದ್ದಾರೆ.