ಮಡಿಕೇರಿ ನ.೨೪ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ತಾ.೨೬ ರಂದು ನಡೆಯುವ ೩೪ನೇ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನಾಚರಣೆಯ ಯಶಸ್ಸಿಗಾಗಿ ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ಪ್ರಮುಖರು ದೇವಟ್ ಪರಂಬುವಿನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ನರಮೇಧದ ಸ್ಮಾರಕ ಸ್ಥಳದಲ್ಲಿ ಪುಷ್ಪ ನಮನ ಸಲ್ಲಿಸಿ ಸಿಎನ್‌ಸಿ ಬೇಡಿಕೆಗಳ ಈಡೇರಿಕೆಗೆ ಶಕ್ತಿ ತುಂಬುವAತೆ ಕೋರಿದರು.

ಈ ಸಂದರ್ಭ ಮಾತನಾಡಿದ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು ಮತ್ತು ಎಸ್‌ಟಿ ಟ್ಯಾಗ್ ನೀಡಬೇಕು. ಅಂತರರಾಷ್ಟಿçÃಯ ಕಾನೂನಿನಡಿಯಲ್ಲಿ ಕೊಡವ ಬುಡಕಟ್ಟಿನ ಮಾತೃ ಮಣ್ಣಿನಲ್ಲಿ ಐತಿಹಾಸಿಕ ನಿರಂತರತೆಗಾಗಿ ಸಾರ್ವತ್ರಿಕ ಮನ್ನಣೆಯನ್ನು ಕಲ್ಪಿಸಬೇಕು. ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೊಡವ ನ್ಯಾಷನಲ್ ಡೇ ಸಂದರ್ಭ ಮಂಡಿಸುವುದಾಗಿ ತಿಳಿಸಿದರು.

ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆಯುವ ಕೊಡವ ನ್ಯಾಷನಲ್ ಡೇ ಮತ್ತು ಭಾರತೀಯ ಸಂವಿಧಾನ ದಿನಾಚರಣೆಯಲ್ಲಿ ಸರ್ವ ಕೊಡವರು ಸಾಂಪ್ರದಾಯಿಕ ಕೊಡವ ಉಡುಪಿನಲ್ಲಿ ಒಗ್ಗಟ್ಟಿನಿಂದ ಪಾಲ್ಗೊಳ್ಳುವಂತೆ ಕೋರಿದರು.

ಸಿಎನ್‌ಸಿ ಪ್ರಮುಖರಾದ ಕಲಿಯಂಡ ಪ್ರಕಾಶ್, ಪಟ್ಟಮಾಡ ಕುಶ, ಮಂದಪAಡ ಮನೋಜ್ ಹಾಗೂ ಚೀಯಬೆರ ಸತೀಶ್ ಹಾಜರಿದ್ದು ಹಿರಿಯರಿಗೆ ಗೌರವ ಅರ್ಪಿಸಿದರು.