ಕುಶಾಲನಗರ, ನ. ೨೪: ಪಟ್ಟಣದ ಸ್ವಚ್ಛತೆಯ ಬಗ್ಗೆ ದಿನನಿತ್ಯ ಶ್ರಮಿಸುತ್ತಿರುವ ಪೌರಕಾರ್ಮಿಕರ ಮತ್ತು ಅವರ ಕುಟುಂಬ ಸದಸ್ಯರ ಏಳಿಗೆ ಹಾಗೂ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸ ಬೇಕಾಗಿದೆ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಿ.ಆರ್. ರಾಜು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರದ ಪುರಸಭೆಯಲ್ಲಿ ನಡೆದ ಮ್ಯಾನ್ವಲ್ ಸ್ಕಾವೆಂಜರ್ ಗಳಿಗೆ ಅರಿವು ಮೂಡಿಸುವ ಸಂಬAಧ ಕಾರ್ಯಕ್ರಮ ಹಾಗೂ ಪೌರಕಾರ್ಮಿಕರ ಕುಂದು ಕೊರತೆಗಳ ಸಭೆಯಲ್ಲಿ ಮಾತನಾಡಿದ ಅವರು, ಪೌರಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರ ಭದ್ರತೆಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಬೇಕಾಗಿದೆ ಎಂದರು.
ಕುಶಾಲನಗರ ಪುರಸಭೆಯಲ್ಲಿ ಪೌರಕಾರ್ಮಿಕರ ಹಾಗೂ ದಿನಗೂಲಿ ಕಾರ್ಮಿಕರ ಬಗ್ಗೆ ಸ್ಥಳೀಯ ಆಡಳಿತ ಹೆಚ್ಚಿನ ಕಾಳಜಿ ವಹಿಸುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ಕುಶಾಲನಗರ ಪುರಸಭೆಯಲ್ಲಿ ಪೌರಕಾರ್ಮಿಕರಿಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಜೊತೆಗೆ ಕುಟುಂಬ ಸದಸ್ಯರಿಗೆ ಕೂಡ ಸೌಲಭ್ಯ ಕಲ್ಪಿಸಿರುವ ಬಗ್ಗೆ ಮಾಹಿತಿ ಒದಗಿಸಿದರು.
ಕುಶಾಲನಗರ ಪೌರಕಾರ್ಮಿಕ ಸಂಘದ ಅಧ್ಯಕ್ಷರಾದ ಗಣೇಶ್ ಮಾತನಾಡಿ ರಾಜ್ಯ ಸಂಘದ ಮೂಲಕ ಸ್ಥಳೀಯ ಪೌರಕಾರ್ಮಿಕರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸಹಕಾರ ಕೋರಿದರು. ಪುರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರ ಸಮಸ್ಯೆಗಳ ಬಗ್ಗೆ ಅವರು ಮಾಹಿತಿ ನೀಡಿದರು.
ಕುಶಾಲನಗರ ಪುರಸಭೆ ಅಧ್ಯಕ್ಷರಾದ ಜಯಲಕ್ಷಿö್ಮ ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರಸಭೆ ವತಿಯಿಂದ ಪ್ರಮುಖರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪೌರಕಾರ್ಮಿಕರ ರಾಜ್ಯಸಂಘದ ಪ್ರಧಾನ ಕಾರ್ಯದರ್ಶಿ ಎಂ. ವಡಿವೇಲು, ಕೊಡಗು ಜಿಲ್ಲಾ ಜಾಗೃತಿ ಸಮಿತಿಯ ವಿಜಿ ಕುಮಾರ್ ಪರಮೇಶ್, ಪೌರಕಾರ್ಮಿಕರ ಸಂಘಟನೆ ಕಾರ್ಯದರ್ಶಿ ಸುರೇಶ್ ಮಹದೇವ, ಲಕ್ಷಿö್ಮ, ದಫೆದಾರ್ ಮೋಹನ್ ಕುಮಾರ್, ಮತ್ತಿತರರು ಇದ್ದರು.