ಮಡಿಕೇರಿ, ನ. ೨೪: ವೀರಾಜ ಪೇಟೆ ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ವತಿಯಿಂದ ೨ನೇ ಹಂತದ ಅರ್ಜಿ ಗಳನ್ನು ವಿಲೇವಾರಿ ಮಾಡುವ ಸಲು ವಾಗಿ ಸಂಬAಧಿಸಿದ ಸ್ಥಳಗಳನ್ನು ಪರಿಶೀಲಿಸಲಾಯಿತು.
ವೀರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರ ನಿರ್ದೇಶನದ ಮೇರೆಗೆ ವೀರಾಜಪೇಟೆ ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಆರ್.ಕೆ. ಅಬ್ದುಲ್ ಸಲಾಂ, ಸದಸ್ಯರುಗಳಾದ ವಿ.ಕೆ. ಸತೀಶ್ ಕುಮಾರ್, ಕೋಳೆರ ಟೀನಾ ಅವರ ನೇತೃತ್ವದಲ್ಲಿ ತಹಶೀಲ್ದಾರ್ ರಾಮಚಂದ್ರ, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ನಡೆಸಿದರು. ವೀರಾಜ ಪೇಟೆ ಹೋಬಳಿಯ ಹೆಗ್ಗಳ, ಆರ್ಜಿ, ಬೇಟೋಳಿ ಗ್ರಾಮಗಳಲ್ಲಿ ಸರ್ಕಾರಿ ಜಾಗ ಮಂಜೂರಾತಿ ಕೋರಿ ಫಾರಂ ೫೭ರಲ್ಲಿ ಈಗಾಗಲೇ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬAಧ ಸ್ಥಳ ಪರಿಶೀಲನೆ ನಡೆಸಲಾಯಿತು ಎಂದು ಆರ್.ಕೆ. ಅಬ್ದುಲ್ ಸಲಾಂ ತಿಳಿಸಿದರು.