ಮಡಿಕೇರಿ, ನ.೩೦ : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಅವರು ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬAಧಿಸಿದAತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ ಸಂಬAಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಶಿಶು ಮತ್ತು ತಾಯಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇರಬೇಕು. ಉತ್ತಮ ಆರೋಗ್ಯವಿದ್ದಲ್ಲಿ ಕುಟುಂಬ ನಿರ್ವಹಣೆ ಚೆನ್ನಾಗಿರುತ್ತದೆ. ಇದರಿಂದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲೆಡೆ ಆರೋಗ್ಯ ಮತ್ತು ಶುಚಿತ್ವ ಬಗ್ಗೆ ಜಾಗೃತಿ ಮೂಡಿಸಬೇಕು. ೫ ವರ್ಷದೊಳಗಿನ ಮಕ್ಕಳಿಗೆ ಕಾಲಕಾಲಕ್ಕೆ ಚುಚ್ಚುಮದ್ದು ಕೊಡಿಸುವಂತಾಗಲು ಅರಿವು ಮೂಡಿಸಬೇಕು. ಹಾಗೆಯೇ ಗರ್ಭಿಣಿಯರು ಸಹ ಕಾಲಕಾಲಕ್ಕೆ ಆರೋಗ್ಯ ಪರಿಶೀಲಿಸಿಕೊಳ್ಳಬೇಕು ಎಂದರು.

ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಮಧುಸೂದನ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯಿಂದ ಅಕ್ಟೋಬರ್ ಅಂತ್ಯದವರೆಗೆ ೫ ವರ್ಷದೊಳಗಿನ ೧೫ ಶಿಶುಗಳು ವಿವಿಧ ಕಾರಣಗಳಿಂದ ಮರಣ ಹೊಂದಿರುವುದಾಗಿ ಮಾಹಿತಿ ನೀಡಿದರು.

ಈ ೧೫ ಶಿಶುಗಳಲ್ಲಿ ೭ ಪ್ರಕರಣಗಳು ಅವಧಿ ಪೂರ್ವ ಜನನ, ಅನುವಂಶೀಯ ಕಾರಣಗಳು ಹಾಗೂ ಜನನ ಸಂದರ್ಭದಲ್ಲಿ ರಕ್ತಸ್ರಾವ ಸಂಭವಿಸಿದ ಉಸಿರಾಟದ ತೊಂದರೆಯಿAದ ಸಾವು. ಉಳಿದಂತೆ ನಾಟಿ ಔಷಧಿ ಕುಡಿಸಿ, ಜ್ವರ, ಶೀತ, ಕೆಮ್ಮು ಬಂದು ಮಕ್ಕಳ ಸಾವು ಸಂಭವಿಸಿದೆ. ಗರ್ಭಿಣಿಯರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳದಿರುವುದು ಹೀಗೆ ಹಲವು ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಶೇ.೮೭ ಕ್ಕೂ ಹೆಚ್ಚು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗುತ್ತಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಮಾಹಿತಿ ನೀಡಿ ಜಿಲ್ಲೆಯಲ್ಲಿ ಜನವರಿಯಿಂದ ಇದುವರೆಗೆ ೩೭೧ ಕ್ಷಯರೋಗ ಪ್ರಕರಣಗಳು ವರದಿಯಾಗಿದ್ದು, ಕಾಲಕಾಲಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ತಾಲೂಕು ವೈದ್ಯಾಕಾರಿಗಳಾದ ಡಾ. ಯತಿರಾಜು, ಡಾ. ಚೇತನ್, ಸ್ತಿçà ಆರೋಗ್ಯ ತಜ್ಞ ಡಾ. ಸೋಮಶೇಖರ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ. ರಂಗಧಾಮಪ್ಪ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಗಾಯತ್ರಿ, ಆಹಾರ ಸುರಕ್ಷತೆ ವಿಭಾಗದ ಮಂಜುನಾಥ್, ಜಿ.ಪಂ.ಇಇ ನಾಯಕ್, ವಿವಿಧ ಇಲಾಖಾ ಅಧಿಕಾರಿಗಳು ಇತರರು ಇದ್ದರು.