ನಾಪೋಕ್ಲು, ಫೆ. ೨೧: ಸಮೀಪದ ಹೊದ್ದೂರು ಗ್ರಾಮದ ಐತಿಹಾಸಿಕ ಹಿನ್ನೆಲೆ ಇರುವ ಪವಾಡ ಸದೃಶ ಶ್ರೀ ಶಾಸ್ತ-ಈಶ್ವರ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ಸಂಪನ್ನಗೊAಡಿತು. ವಾರ್ಷಿಕೋತ್ಸ ವದ ಅಂಗವಾಗಿ ಸೋಮವಾರ ಬೆಳಿಗ್ಗೆ ಶಾಸ್ತ - ಈಶ್ವರ ದೇವರ ಬಲಿ, ಗಣಪತಿ ಹೋಮ, ಅಲಂಕಾರ ಪೂಜೆ, ಬೇಟೆ ಅಯ್ಯಪ್ಪ ಸನ್ನಿಧಿ ಅಭಿಷೇಕ ಪೂಜೆ, ವಿಷ್ಣುಮೂರ್ತಿ ದೈವ ನೆಲೆ ಅಭಿಷೇಕ ಪೂಜೆ ಜರುಗಿತು. ಶ್ರೀ ಶಾಸ್ತ - ಈಶ್ವರ ದೇವರ ನೆರ್‌ಪು ಬಲಿ ಬಳಿಕ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಸಂಜೆ ಶ್ರೀ ಶಾಸ್ತ - ಈಶ್ವರ ದೇವರ ಅವಭೃತ ಸ್ನಾನದ ಬಳಿಕ ಮೆರವಣಿಗೆಯ ಮೂಲಕ ದೇವ ಸನ್ನಿಧಿಯಲ್ಲಿ ಮಹಿಳೆಯರು ಸಾಂಪ್ರದಾಯಿಕ ತಳಿಯತಕ್ಕಿ ಬೊಳಕ್ ನೊಂದಿಗೆ ಸ್ವಾಗತ ಕೋರಲಾಯಿತು. ವಿವಿಧ ನೃತ್ಯ ಸಂಪ್ರೊಕ್ಷಣೆಯೊAದಿಗೆ ದೈವಿಕ ವಿಧಿವಿಧಾನಗಳು ಜರುಗಿದವು. ಬಳಿಕ ವಿಷ್ಣುಮೂರ್ತಿ ದೇವರ ತೋಯತ ತೆರೆ ಹಾಗೂ ಮೇಲೇರಿಗೆ ಅಗ್ನಿ ಸ್ಪರ್ಶ ನೆರವೇರಿಸಲಾಯಿತು. ಬೆಳಿಗ್ಗೆ ವಿಷ್ಣುಮೂರ್ತಿ ದೈವದ ಕೋಲ ಜರುಗಿತು. ಭಕ್ತರಿಗೆ ಉಪಹಾರ ಹಾಗೂ ಅನ್ನಸಂತರ್ಪಣೆ ಯನ್ನು ಏರ್ಪಡಿಸಲಾಗಿತ್ತು. ದೇವಸ್ಥಾನದ ಪ್ರಧಾನ ಅರ್ಚಕ ಜಯರಾಜ್ ತಂತ್ರಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿಕೊಟ್ಟರು,

ಮೂರು ವರ್ಷಗಳ ಹಿಂದೆ vದೇವಾಲಯ ಜೀರ್ಣೋದ್ಧಾರ ಗೊಂಡು ಪುನರ್ ಪ್ರತಿಷ್ಠಾಪನೆ ಗೊಳ್ಳುವುದರ ಮೂಲಕ ಐತಿಹಾಸಿಕ ಹಿನ್ನೆಲೆಯುಳ್ಳ ಪವಾಡ ಸದೃಶ ದೇವಾಲಯವಾಗಿ ರೂಪುಗೊಂಡಿದೆ.

ಈ ಸಂದರ್ಭ ಶ್ರೀ ಶಾಸ್ತ-ಈಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ, ಗೌರವ ಕಾರ್ಯದರ್ಶಿ ಕೂಡಂಡ ಸಾಬ ಸುಬ್ರಮಣಿ ಹಾಗೂ ಗ್ರಾಮದ ದೇವ ತಕ್ಕ ನೆರವಂಡ ಸಂಜಯ್ ಪೂಣಚ್ಚ, ದೇವಾಲಯ ಸಮಿತಿ ಸದಸ್ಯರು ಸೇರಿದಂತೆ ಭಕ್ತಾದಿಗಳು ಹಾಜರಿದ್ದರು.