ಮಡಿಕೇರಿ, ಮಾ. ೭ : ಕೊಡಗು ಪತ್ರಕರ್ತರ ಸಂಘದಿAದ ಅತ್ಯುತ್ತಮ ವರದಿಗಳಿಗೆ ನೀಡಲಾಗುವ ೨೦೨೩-೨೪ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳು ಪ್ರಕಟಗೊಂಡಿದ್ದು, ಏಳು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನಾಗಿದ್ದಾರೆ.
ಸಂಘದಿAದ ನೀಡಲಾಗುವ ಅತ್ಯುತ್ತಮ ರಾಜಕೀಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ 'ಪ್ರಜಾಪ್ರಭುತ್ವದ ದೇಗುಲದೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ದುಷ್ಕರ್ಮಿಗಳು' ಎಂಬ ವರದಿಗೆ ಅನಿಲ್ ಎಚ್.ಟಿ. ಪಡೆದುಕೊಂಡಿದ್ದಾರೆ. ಅತ್ಯುತ್ತಮ ಗ್ರಾಮೀಣ ವರದಿ ಪ್ರಶಸ್ತಿಗೆ ವಿಜಯವಾಣಿಯಲ್ಲಿ ಪ್ರಕಟಗೊಂಡ 'ಸೌಲಭ್ಯ ವಂಚಿತ ನಾಗರಹೊಳೆ ಆಶ್ರಮ ಶಾಲೆ' ಎಂಬ ವರದಿಗೆ ವಿನೋದ್ ಮೂಡಗದ್ದೆ ಭಾಜನರಾಗಿದ್ದಾರೆ. ಅತ್ಯುತ್ತಮ ಕೃಷಿ ವರದಿ ಪ್ರಶಸ್ತಿ ಪ್ರಜಾವಾಣಿಯಲ್ಲಿ ಪ್ರಕಟಗೊಂಡ `ಏಲಕ್ಕಿ ಕೃಷಿಯಲ್ಲಿ ಯಶಸ್ಸು ಕಂಡ ದಂಪತಿ' ಎಂಬ ವರದಿಗೆ ಡಿ.ಪಿ. ಲೋಕೇಶ್ ಅವರಿಗೆ ಲಭಿಸಿದೆ. ಅತ್ಯುತ್ತಮ ಕ್ರೀಡಾ ವರದಿ ಪ್ರಶಸ್ತಿ ಕನ್ನಡ ಪ್ರಭದಲ್ಲಿ ಪ್ರಕಟಗೊಂಡ ವಿಘ್ನೇಶ್ ಭೂತನಕಾಡು ಅವರ `ಏಷ್ಯನ್ ಗೇಮ್ಸ್ಗೆ ಪುಟ್ಟ ಜಿಲ್ಲೆ ಕೊಡಗಿನ ಕ್ರೀಡಪಟುಗಳು' ಎಂಬ ವರದಿಗೆ ದೊರೆತಿದೆ. ಸಂಘದ ಸಲಹೆಗಾರರು ಹಾಗೂ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕರಾದ ಬಿ.ಜಿ. ಅನಂತಶಯನ ಅವರು ತಮ್ಮ ತಾಯಿ ರಾಜಲಕ್ಷಿö್ಮ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿ ಪ್ರಶಸ್ತಿಗೆ ವಿಜಯವಾಣಿಯಲ್ಲಿ ಪ್ರಕಟಗೊಂಡ ಉಷಾ ಪ್ರೀತಮ್ ಅವರ `ಆದಿವಾಸಿಗಳಿಗೆ ಬೇಕಿದೆ ಜಾಗೃತಿ ಬಾಲ್ಯವಿವಾಹ ತಂದಿಟ್ಟ ಸಂಕಷ್ಟ' ಎಂಬ ವರದಿ ಭಾಜನವಾಗಿದೆ.
ದೃಶ್ಯಮಾಧ್ಯಮ ವಿಭಾಗದಲ್ಲಿ ಮಾನವೀಯ ವರದಿ ಪ್ರಶಸ್ತಿ ಕೊಡಗು ಚಾನಲ್ನ ಟಿ.ಜೆ. ಪ್ರವೀಣ್ ಅವರ `ಕಾಡಂಚಿನಿAದ ನಾಡಿಗೆ ಬಂದವರ ಶೋಚನೀಯ ಸ್ಥಿತಿ' ಎಂಬ ವರದಿಗೆ ಲಭಿಸಿದೆ. ಕೊಡಗಿನ ಜ್ವಲಂತ ಸಮಸ್ಯೆಗಳ ಕುರಿತ ವರದಿ ಪ್ರಶಸ್ತಿ ಟಿವಿ೧ನ 'ಸಾಲು ಸಾಲು ರಜೆಯಲ್ಲಿ ಮಂಜಿನ ನಗರಿಯಲ್ಲಿ ಕಾಡುವ ಟ್ರಾಫಿಕ್ ಸಮಸ್ಯೆ' ಎಂಬ ವರದಿಗೆ ಲಭಿಸಿದೆ. ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ತಾ. ೯ ರಂದು ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.