ಸೋಮವಾರಪೇಟೆ, ಮಾ. ೯: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ಒಟ್ಟು ೫೨ ಮಂದಿ ನೇತ್ರ ಪರೀಕ್ಷೆ ಮಾಡಿಸಿಕೊಂಡರು. ೧೦ ಮಂದಿ ವೃದ್ದರಿಗೆ ಕಣ್ಣಿನ ಪೊರೆ ಇದ್ದು, ಅವರನ್ನು ಅಮ್ಮ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತçಚಿಕಿತ್ಸೆ ಮಾಡಿಸಿ, ಆಸ್ಪತ್ರೆಯ ವಾಹನದಲ್ಲೇ ಕರೆತಂದು ಬಿಡಲಾಯಿತು.

ನೇತ್ರ ತಜ್ಞರಾದ ಸಂದೀಪ್, ಪ್ರೀತಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ದಿವ್ಯ, ಸಮುದಾಯ ಆರೋಗ್ಯ ಅಧಿಕಾರಿ ಧರಣೇಶ್ ರಾಜ್ ಇದ್ದರು.