ಮಡಿಕೇರಿ, ಮಾ. ೧೧: ಸಾಹಿತ್ಯ, ಜಾನಪದ ಕಲೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕೊಡಗು ಜಿಲ್ಲೆ ಶ್ರೀಮಂತಿಕೆ ಹೊಂದಿದ್ದು, ಇವುಗಳನ್ನು ದಾಖಲೀಕರಣ ಮಾಡುವಂತಾಗಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥರಾದ ಕೋಡಿರ ಲೋಕೇಶ್ ಸಲಹೆ ನೀಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸುಲೋಚನಾ ಡಾ.ಎಂ.ಜಿ. ನಾಗರಾಜ್ ದಂಪತಿಯವರ ದತ್ತಿ ಇವರ ವತಿಯಿಂದ ಮಂಗಳವಾರ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆದ ಕೊಡಗು ಜಿಲ್ಲೆಯ ಪುರಾತತ್ವ ಜಾನಪದ ಮತ್ತು ಪರಿಸರ ವಿಚಾರಗೋಷ್ಠಿ-ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೊಡಗು ಜಿಲ್ಲೆ ಬಹುಸಂಸ್ಕೃತಿ ಒಳಗೊಂಡಿದ್ದು, ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರವನ್ನು ಮತ್ತಷ್ಟು ಪಸರಿಸುವಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಪ್ರಾಚೀನ ಸಂಸ್ಕೃತಿ, ಕಲೆಗಳನ್ನು ಉಳಿಸಿ ಬೆಳೆಸುವಂತಾಗಬೇಕು.

ಸಾಹಿತ್ಯ, ಇತಿಹಾಸ, ಜಾನಪದವು ವಿಶಿಷ್ಟ ಸಂಸ್ಕೃತಿಯನ್ನು ಹೊಂದಿದೆ. ಅವುಗಳನ್ನು ಮುಂದಿನ ಜನಾಂಗಕ್ಕೂ ಕೊಂಡೊಯ್ಯಬೇಕು ಎಂದರು.

ಸಾಹಿತಿ ಎಂ.ಜಿ. ನಾಗರಾಜ್ ಕೊಡಗು ಜಿಲ್ಲೆಯ ಬಗ್ಗೆ ವೈವಿಧ್ಯವಾಗಿ ಬರೆದಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗಿನ ಪರಿಸರ, ದೇವರ ಕಾಡುಗಳನ್ನು ಸಂರಕ್ಷಿಸುವಲ್ಲಿ ಹಲವರು ಶ್ರಮಿಸಿದ್ದಾರೆ. ಆ ನಿಟ್ಟಿನಲ್ಲಿ ಮುಂದೆಯೂ ಸಹ ಕೊಡಗಿನ ಪ್ರಾಕೃತಿಕ ಸೌಂದರ್ಯವನ್ನು ಸಂರಕ್ಷಿಸಬೇಕು. ನಾಗರಿಕತೆ ಬೆಳೆದಂತೆ ಮಾನವ ಮತ್ತು ವನ್ಯಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದೆ. ಈ ಬಗ್ಗೆ ಚಿಂತಿಸಬೇಕು ಎಂದರು.

ವೀರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜು ಉಪನ್ಯಾಸಕಿ ಪ್ರತಿಮಾ ರೈ ಮಾತನಾಡಿ, ಬುಡಕಟ್ಟು ಜನರ ಬದುಕು ಮತ್ತು ಜಾನಪದ ಪರಿಸರ ಒಂದಕ್ಕೊAದು ಸಂಬAಧವಿದ್ದು, ಕೃಷಿ ಪ್ರದಾನ ಜಿಲ್ಲೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರವು ತನ್ನದೇ ಆದ ಸ್ಥಾನ ಹೊಂದಿದೆ ಎಂದರು.

ಪ್ರಕೃತಿಯ ಆರಾಧನೆ, ಮರ ಗಿಡಗಳನ್ನು ದೇವರ ರೂಪದಲ್ಲಿ ಪೂಜಿಸುವುದು, ಜಾನಪದ ಕಲೆಗಳನ್ನು ಪ್ರೀತಿಸುವುದು, ಗೌರವಿಸುವುದು, ಕೊಡಗಿನ ಸಾಂಸ್ಕೃತಿಕ ಹಬ್ಬಗಳಾದ ಹುತ್ತರಿ, ಕೈಲ್‌ಪೋಳ್ದ್, ಕಾವೇರಿ ಸಂಕ್ರಮಣ, ಹಬ್ಬಗಳು ವೈಶಿಷ್ಟö್ಯತೆಯಿಂದ ಕೂಡಿವೆ ಎಂದರು.

ಸಾಹಿತಿ, ಖ್ಯಾತ ಸಂಶೋಧಕರು ಹಾಗೂ ದತ್ತಿದಾನಿಗಳಾದ ಡಾ. ಎಂ.ಜಿ. ನಾಗರಾಜ್ ಮಾತನಾಡಿ, ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳನ್ನು ಉಳಿಸಬೇಕು. ಕಲೆ, ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಜನರು ತೊಡಗಿಸಿಕೊಳ್ಳಬೇಕು ಎಂದರು.

(ಮೊದಲ ಪುಟದಿಂದ) ಎಫ್‌ಎಂಸಿ ಕಾಲೇಜಿನ ಪ್ರಾಂಶು ಪಾಲರಾದ ಮೇ. ಪ್ರೊ.ಬಿ.ರಾಘವ ಮಾತನಾಡಿ, ಆಧುನಿಕತೆ ಹೆಸರಿನಲ್ಲಿ ಸಮಾಜ ಯಾವ ದಿಕ್ಕಿನೆಡೆ ಸಾಗುತ್ತಿದೆ ಎಂಬ ಬಗ್ಗೆ ಯೋಚಿಸಬೇಕು. ಅಭಿವೃದ್ಧಿ ಹೆಸರಿನಲ್ಲಿ ದೌರ್ಜನ್ಯ ನಿಲ್ಲಬೇಕು. ಬುಡಕಟ್ಟು ಸಂಸ್ಕೃತಿಯ ಮೇಲೆ ಒಂದಲ್ಲ ಒಂದು ರೀತಿ ದಾಳಿ ನಡೆಯುತ್ತಿದ್ದು, ಇದು ಕೊನೆಯಾಗಬೇಕು ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ಮುನಿರ್ ಅಹಮದ್ ಮಾತನಾಡಿದರು.

ವಿಚಾರಗೋಷ್ಠಿಯಲ್ಲಿ ಕನ್ನಡ ಪ್ರಾಧ್ಯಾಪಕರಾದ ಡಾ.ಜಮೀರ್ ಅಹ್ಮದ್, ನಿವೃತ್ತ ಪ್ರಾಂಶುಪಾಲ ರಾದ ಡಾ.ಜೆ. ಸೋಮಣ್ಣ, ಅರಣ್ಯ ಕಾಲೇಜಿನ ನಿವೃತ್ತ ಮುಖ್ಯಸ್ಥರಾದ ಡಾ.ಸಿ.ಜಿ.ಕುಶಾಲಪ್ಪ, ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಮಾತನಾಡಿದರು.

ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಚೊಕ್ಕಾಡಿ ಪ್ರೇಮ ರಾಘವಯ್ಯ ಇದ್ದರು. ಕವಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಸಾಹಿತಿ ಬಿ.ಎ. ಷಂಶುದ್ದೀನ್, ಪ್ರಾಧ್ಯಾಪಕರಾದ ಡಾ.ನಯನ ಕಶ್ಯಪ್ ಮಾತನಾಡಿ ದರು. ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಎಫ್‌ಎಂಸಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶೈಲಶ್ರೀ, ಎಚ್.ಕೆ. ರೇಣುಶ್ರೀ, ಇತರರು ಇದ್ದರು.

ಲೀಲಾವತಿ ತೊಡಿಕಾನ, ಶ್ವೇತ ರವೀಂದ್ರ, ಡಾ.ಕಾವೇರಿ ಪ್ರಕಾಶ್, ಪುಪ್ಪಲತಾ ಶಿವಪ್ಪ, ವಿಮಲ ದಶರಥ, ಗಿರೀಶ್ ಕಿಗ್ಗಾಲು, ಜಗದೀಶ್ ಜೋಡುಬೀಟಿ, ಅರ್ಪಿತ ಕೆ.ಜಿ., ಟಾಮಿ ತೋಮಸ್, ಹವ್ಯಾಸ್ ವೈಲೇಶ್, ಪುದಿಯ ನೆರವನ ರೇವತಿ ರಮೇಶ್ ಕವಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಕೇಶವ ಕಾಮತ್, ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಗೌರವ ಕಾರ್ಯದರ್ಶಿ ಮುನಿರ್ ಅಹಮದ್ ಮಾತನಾಡಿದರು.

ವಿಚಾರಗೋಷ್ಠಿಯಲ್ಲಿ ಕನ್ನಡ ಪ್ರಾಧ್ಯಾಪಕರಾದ ಡಾ.ಜಮೀರ್ ಅಹ್ಮದ್, ನಿವೃತ್ತ ಪ್ರಾಂಶುಪಾಲ ರಾದ ಡಾ.ಜೆ. ಸೋಮಣ್ಣ, ಅರಣ್ಯ ಕಾಲೇಜಿನ ನಿವೃತ್ತ ಮುಖ್ಯಸ್ಥರಾದ ಡಾ.ಸಿ.ಜಿ.ಕುಶಾಲಪ್ಪ, ಪುರಾತತ್ವ ಇಲಾಖೆಯ ಸಹಾಯಕ ನಿರ್ದೇಶಕಿ ರೇಖಾ ಮಾತನಾಡಿದರು.

ಕಸಾಪ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್, ಚೊಕ್ಕಾಡಿ ಪ್ರೇಮ ರಾಘವಯ್ಯ ಇದ್ದರು. ಕವಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಸಾಹಿತಿ ಬಿ.ಎ. ಷಂಶುದ್ದೀನ್, ಪ್ರಾಧ್ಯಾಪಕರಾದ ಡಾ.ನಯನ ಕಶ್ಯಪ್ ಮಾತನಾಡಿ ದರು. ಕೋಶಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಎಫ್‌ಎಂಸಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶೈಲಶ್ರೀ, ಎಚ್.ಕೆ. ರೇಣುಶ್ರೀ, ಇತರರು ಇದ್ದರು.

ಲೀಲಾವತಿ ತೊಡಿಕಾನ, ಶ್ವೇತ ರವೀಂದ್ರ, ಡಾ.ಕಾವೇರಿ ಪ್ರಕಾಶ್, ಪುಪ್ಪಲತಾ ಶಿವಪ್ಪ, ವಿಮಲ ದಶರಥ, ಗಿರೀಶ್ ಕಿಗ್ಗಾಲು, ಜಗದೀಶ್ ಜೋಡುಬೀಟಿ, ಅರ್ಪಿತ ಕೆ.ಜಿ., ಟಾಮಿ ತೋಮಸ್, ಹವ್ಯಾಸ್ ವೈಲೇಶ್, ಪುದಿಯ ನೆರವನ ರೇವತಿ ರಮೇಶ್ ಕವಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.