ಮಡಿಕೇರಿ, ಮಾ.೧೦: ಕಲಿಕೆ ಎನ್ನುವುದು ನಿರಂತರ ಪ್ರಕ್ರಿಯೆ. ಉತ್ತಮ ಜೀವನಕ್ಕಾಗಿ ಸದಾ ಕಾಲ ನಾವು ಕಲಿಯುತ್ತಿದ್ದಲ್ಲಿ ಕೌಶಲ್ಯ ವೃದ್ಧಿಸುತ್ತದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಎನ್.ಎಂ.ಉಮೇಶ್ ಉತ್ತಪ್ಪ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು ಮತ್ತು ಸೈಬರ್ ಭದ್ರತೆ ಕುರಿತು ನಗರದ ಮಯೂರ ವ್ಯಾಲಿ ವ್ಯೂ ಹೊಟೇಲ್ನಲ್ಲಿ ಸೋಮವಾರ ನಡೆದ ರಾಜ್ಯ ಮಟ್ಟದ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೊಡಗು ಜಿಲ್ಲಾ ಸಹಕಾರ ಯೂನಿಯನ್ನಿಂದ ಸಹಕಾರ ಕ್ಷೇತ್ರದ ವಿವಿಧ ವಲಯಗಳ ಬವಲರ್ಧನೆಗಾಗಿ ಹಲವಾರು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜಿಲ್ಲೆಯ ಸಹಕಾರ ಸಂಘಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲೆಯ ಸಹಕಾರ ಸಂಘಗಳ ಅಧ್ಯಕ್ಷರುಗಳಿಗೆ ಹೈಟೆಕ್ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲೆಯ ಸಹಕಾರ ಸಂಘಗಳು ತಮ್ಮ ಲಾಭಾಂಶದಲ್ಲಿ ನೀಡುವ ಶಿಕ್ಷಣ ನಿಧಿಯನ್ನು ನೇರವಾಗಿ ಮಹಾಮಂಡಳದ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಮೊತ್ತದಲ್ಲಿ ರಾಜ್ಯದ ಸಹಕಾರ ಕ್ಷೇತ್ರದ ಅಭಿವೃದ್ಧಿಗಾಗಿ ವಿವಿಧ ರೀತಿಯ ತರಬೇತಿ ಹಮ್ಮಿಕೊಳ್ಳಲು ಅನುದಾನ ನೀಡುತ್ತಾರೆ ಎಂದರು.
ಸಹಕಾರ ಸಂಘಗಳು ಸಾಲ ನೀಡುವುದು ಮಾತ್ರವಲ್ಲದೆ ವಿವಿಧ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳಲು ಅನುಗುಣವಾಗುವಂತೆ ಕೇಂದ್ರ ಸರ್ಕಾರವು ಸಹಕಾರ ಸಂಘಗಳನ್ನು ಬಲಿಷ್ಠವನ್ನಾಗಿಸಲು ಹಲವಾರು ಯೋಜನೆ ಹಮ್ಮಿಕೊಂಡಿದ್ದು ಸಂಘಗಳು ಅಳವಡಿಸಿಕೊಂಡು ಮುನ್ನಡೆಯುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.
ಸಹಕಾರ ಸಂಘಗಳ ನಿವೃತ್ತ ಅಪರ ನಿಬಂಧಕರಾದ ಎಚ್.ಎಸ್.ನಾಗರಾಜಯ್ಯ ಅವರು ಸಹಕಾರ ಸಂಘಗಳ ನಿರ್ವಹಣೆಗೆ ಅಗತ್ಯವಿರುವ ಕಾಯ್ದೆ-ಕಾನೂನು, ಸಭೆಗಳು, ಆಡಳಿತ ಮಂಡಳಿ ಚುನಾವಣೆ ಇತ್ಯಾದಿ ವಿಷಯದ ಕುರಿತು ಸೈಬರ್ ಹಾವಳಿ ತಡೆಗೆ ಕೈಗೊಳ್ಳಬಹುದಾದ ಕ್ರಮಗಳು ವಿಷಯದ ಕುರಿತು ಅಂಕಣಕಾರರು, ಬ್ಯಾಂಕಿAಗ್ ವ್ಯಕ್ತಿತ್ವ ವಿಕಸನ ತರಬೇತುದಾರರು ಮತ್ತು ವೃತ್ತಿಮಾರ್ಗದರ್ಶಕರಾದ ಆರ್.ಕೆ. ಬಾಲಚಂದ್ರ ಅವರು ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಪಿ.ಸಿ.ಮನು ರಾಮಚಂದ್ರ, ನಿರ್ದೇಶಕರಾದ ಎನ್.ಎ. ರವಿ ಬಸಪ್ಪ, ಬಿ.ಎ.ರಮೇಶ್ ಚಂಗಪ್ಪ, ಕೆ.ಎಂ.ತಮ್ಮಯ್ಯ, ಸಿ.ಎಸ್. ಕೃಷ್ಣ ಗಣಪತಿ, ಪಿ.ವಿ.ಭರತ್, ಪಿ.ಬಿ. ಯತೀಶ್, ಎನ್.ಎ. ರ್ಯಾಲಿ ಮಾದಯ್ಯ ಇದ್ದರು. ಯೂನಿಯನ್ ವ್ಯವಸ್ಥಾಪಕಿ ಆರ್. ಮಂಜುಳ ಪ್ರಾರ್ಥಿಸಿ, ಸ್ವಾಗತಿಸಿದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು.