ಮಡಿಕೇರಿ ಮಾ.೧೧ : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತçಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು.
ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಹಾಗೂ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ವಿಭಾಗೀಯ ಪೀಠ ರಿಟ್ ಅರ್ಜಿಯ ವಿಚಾರಣೆಯನ್ನು ನಡೆಸಿತು. ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಅವರ ಕಾನೂನು ಸಹಾಯಕರು ವಿಚಾರಣೆ ಸಂದರ್ಭ ಭಾಗಿಯಾಗಿದ್ದರು.
ಸಿಎನ್ಸಿ ಬೇಡಿಕೆಗೆ ಆಕ್ಷೇಪ ಸಲ್ಲಿಸಿದ ಪ್ರತಿವಾದಿಗಳ ಅಹವಾಲನ್ನು ಕೂಡ ಆಲಿಸಿದ ಮುಖ್ಯ ನ್ಯಾಯಾಧೀಶರು ವಿಚಾರಣೆಯ ಮುಂದಿನ ದಿನಾಂಕವನ್ನು ೨೦೨೫ರ ಜೂ.೯ಕ್ಕೆ ನಿಗದಿಪಡಿಸಿದರು. ಸಿಎಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-೨ ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ ೧, ೨ ಮತ್ತು ೩ ಎಂದು ಉಲ್ಲೇಖಿಸಲಾಗಿದೆ.
ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎನ್.ಯು.ನಾಚಪ್ಪ ಜೂ.೯ರಂದು ಡಾ.ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಯಾಲಯದಲ್ಲಿ ಸಮಗ್ರ ವಾದ ಮಂಡನೆ ಮಾಡಲಿದ್ದಾರೆ. ಸಂವಿಧಾನದ ಆಶಯಗಳಿಗೆ ಪೂರಕವಾಗಿ ಕಾನೂನು ಹೋರಾಟದಿಂದ
(ಮೊದಲ ಪುಟದಿಂದ) ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗಕ್ಕೆ ನ್ಯಾಯ ಸಿಗಲಿದೆ. ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಮತ್ತು ಎಸ್ಟಿ ಟ್ಯಾಗ್ ಪಡೆಯುವ ವಿಶ್ವಾಸವಿದೆ ಎಂದರು.
ವಕೀಲರುಗಳಾದ ಕಿರಣ್ ನಾರಾಯಣ್, ಸತ್ಯ ಸಬರ್ವಾಲ್, ಕುಮಾರಿ ಪಾಲಕ್ ಬಿಷ್ಣೋಯ್, ಶ್ರೀಕಾಂತ ಶರ್ಮಾ, ಅಭಿಷೇಕ್ ಜಿ, ಕುಮಾರಿ ಮದಿಹಾ ನಯೀಮ್, ಕುಮಾರಿ ಅನನ್ಯ ದೀಕ್ಷಿತ್, ಮಹೇಶ್ ಯಾದವ್ ಹಾಗೂ ಕುಶೇಂದ್ರ ಶಾಹಿ ಅವರುಗಳು ಡಾ.ಸುಬ್ರಮಣಿಯನ್ ಸ್ವಾಮಿ ಅವರಿಗೆ ಸಹಕರಿಸಿದರು.
ವಿರಾಟ್ ಹಿಂದೂಸ್ತಾನ್ ಸಂಘದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ, ವಿಎಚ್ಎಸ್ ರಾಜ್ಯಾಧ್ಯಕ್ಷ ನಿಖುಂಜ್ ಶಾ, ರೇಖಾ ನಾಚಪ್ಪ, ಕುಮಾರಿ ಶ್ರೇಯಾ ನಾಚಪ್ಪ, ಪಟ್ಟಮಾಡ ಕುಶ, ಮಂದಪAಡ ಮನೋಜ್, ಅರೆಯಡ ಗಿರೀಶ್, ಬೊಟ್ಟಂಗಡ ಗಿರೀಶ್, ಪಾಲಂದಿರ ಜೋಯಪ್ಪ, ಬೇಪಡಿಯಂಡ ಬಿದ್ದಪ್ಪ, ಬೇಪಡಿಯಂಡ ದಿನು, ಕಿರಿಯಮಾಡ ಶೆರಿನ್, ಕಾವಾಡಿಚಂಡ ಮೇದಪ್ಪ, ವಿಎಚ್ಎಸ್ ಸದಸ್ಯರಾದ ನಟರಾಜ್, ಎ.ಬಿ.ಪಾಟೀಲ್, ರವಿಶಂಕರ್ ಹಾಗೂ ಶಿವು ಈ ಸಂದರ್ಭ ಹಾಜರಿದ್ದರು.