ಸೋಮವಾರಪೇಟೆ, ಮಾ. ೧೪: ಇಲ್ಲಿನ ಕಕ್ಕೆಹೊಳೆಯ ಬಳಿಯ ಶ್ರೀ ಮುತ್ತಪ್ಪಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವವು ತಾ.೧೬ ರಿಂದ ಮೂರು ದಿನಗಳು ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಡಿ. ವಿನೋದ್‌ಕುಮಾರ್ ತಿಳಿಸಿದ್ದಾರೆ.

ತಾ.೧೬ ರಂದು ಬೆಳಗ್ಗೆ ೫.೩೦ಕ್ಕೆ ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿಯವರ ನೇತೃತ್ವದಲ್ಲಿ ಗಣಪತಿಹೋಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಸಂಜೆ ೬.೩೦ಕ್ಕೆ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರಿಂದ ವಿಶೇಷ ಆಶ್ಲೇಷ ಬಲಿ ಪೂಜೆ ಜರುಗಲಿದೆ. ಸಂಜೆ ೭ಕ್ಕೆ ಶಾಸಕ ಡಾ. ಮಂತರ್‌ಗೌಡ ಅವರು ನೂತನವಾಗಿ ನಿರ್ಮಿಸಿರುವ ನೈವೇದ್ಯಾ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ.

ತಾ.೧೭ ರಂದು ಸೋಮವಾರ ಮಧ್ಯಾಹ್ನ ೧೨ಕ್ಕೆ ಮಾಜಿ ಸಚಿವ ಅಪ್ಪಚ್ಚುರಂಜನ್ ಅವರು ಜಾತ್ರೋತ್ಸವವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಜಿಪಂ ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಪಾಲ್ಗೊಳಲಿದ್ದಾರೆ. ಅಪರಾಹ್ನ ೩.೩೦ಕ್ಕೆ ಶ್ರೀ ಮುತ್ತಪ್ಪನ್ ದೇವರ ವೆಳ್ಳಾಟಂ ಆರಂಭವಾಗಲಿದೆ. ನಂತರ ವಿಷ್ಣುಮೂರ್ತಿ, ಕರಿಂಗುಟ್ಟಿ ಚಾತನ್, ಕಂಡಕರ್ಣ, ಭಗವತಿ ದೇವಿ, ರಕ್ತ ಚಾಮುಂಡಿ, ಪೊಟ್ಟನ್ ದೇವರ ವೆಳ್ಳಾಟಂ ನಡೆಯಲಿದೆ. ರಾತ್ರಿ ೧೧.೩೦ಕ್ಕೆ ದೇವರ ಕಳಿಕ್ಕಾಪಾಟ್ ಜರುಗಲಿದೆ. ಸಂಜೆ ೪.೩೦ಕ್ಕೆ ಕೇರಳದ ಖ್ಯಾತ ಸಿಂಗಾರಿ ಮೇಳದೊಂದಿಗೆ ಕಳಶದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ತಾ.೧೮ರಂದು ಮಂಗಳವಾರ ಬೆಳಗ್ಗಿನ ಜಾವ ೧ ಗಂಟೆಗೆ ಭಗವತಿ ದೇವಿಯ ಕೋಲ ಆರಂಭವಾಗಲಿದೆ. ೪.೩೦ಕ್ಕೆ ಪೊಟ್ಟನ್ ದೇವರು ಅಗ್ನಿಗೇರುವುದು. ಅಪರಾಹ್ನ ೩.೩೦ಕ್ಕೆ ಕೋಲಗಳ ಮುಕ್ತಾಯ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಎರಡು ದಿನಗಳು ಭಕ್ತಾದಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿದೆ.

ಏ.೩ರಂದು ಪ್ರತಿಷ್ಠಾಪನಾ ವಾರ್ಷಿಕೋತ್ಸವ

ಏ.೩ರಂದು ಗುರುವಾರ ಸಂಜೆ ೬ ಗಂಟೆಯಿAದ ಏ.೪ ರಂದು ಶುಕ್ರವಾರ ಮಧ್ಯಾಹ್ನ ೧೨.೩೦ರವರೆಗೆ ಕೇರಳದ ಕಾಳೇಘಾಟ್‌ನ ತಂತ್ರಿಗಳಾದ ನಾರಾಯಣನ್ ನಂಬೂದರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರು ತಿಳಿಸಿದ್ದಾರೆ.