ಮಡಿಕೇರಿ, ಮಾ.೧೫: ಕೊಡವ ಸಾಹಿತ್ಯ ಅಕಾಡಮಿಯ ಆಡಳಿತ ಮಂಡಳಿ ರಚನೆಯಾಗಿ ಮಾರ್ಚ್ ೧೫ಕ್ಕೆ ಒಂದು ವರ್ಷವಾಗಿದ್ದು, ಈ ಸವಿನೆನಪಿಗಾಗಿ ‘ಕೊಡವ ಬಲ್ಯ ನಮ್ಮೆ - ಸಾಂಸ್ಕೃತಿಕ ಉತ್ಸವ ಏರ್ಪಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ; ಅಮ್ಮತ್ತಿ ಕೊಡವ ಸಮಾಜದ ಸಹಯೋಗದೊಂದಿಗೆ ಅಮ್ಮತ್ತಿಯಲ್ಲಿ ತಾ. ೨೯ ಹಾಗೂ ೩೦ರಂದು ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಸಾಂಸ್ಕೃತಿಕ - ಜಾನಪದ ಮೆರವಣಿಗೆ, ಸಾಧಕರಿಗೆ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿ, ವಿಚಾರಗೋಷ್ಠಿ, ಕವಿಗೋಷ್ಠಿ, ಪರಿಕರಗಳ ವಿತರಣೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ಅನಾವರಣಗೊಳ್ಳಲಿವೆ ಎಂದು ತಿಳಿಸಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಸಾಂಗವಾಗಿ ನಡೆಸುವ ಸಲುವಾಗಿ ವಿವಿಧ ಉಪಸಮಿತಿಗಳನ್ನು ರಚನೆ ಮಾಡಲಾಗಿದೆ. ಸಮಿತಿಯವರು ಈಗಾಗಲೇ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ದಿನದ ಉತ್ಸವದಲ್ಲಿ ಸುಮಾರು ೪ ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಸಾಂಸ್ಕೃತಿಕ - ಜಾನಪದ ಮೆರವಣಿಗೆ

ಕೊಡವ ಬಲ್ಯನಮ್ಮೆಯ ಮೊದಲ ದಿನ ತಾ. ೨೯ರಂದು ಬೆಳಿಗ್ಗೆ ೯ ಗಂಟೆಗೆ ಹೊಸೂರು ಜಂಕ್ಷನ್‌ನಿAದ ಕೊಡವ ಸಮಾಜದವರೆಗೆ ಕೊಡವ ಸಾಂಸ್ಕೃತಿಕ - ಜಾನಪದ ಮೆರವಣಿಗೆಯನ್ನು ಅಮ್ಮತ್ತಿ ನಾಡಿನ ಹಿರಿಯರು ಹಾಗೂ ಸಮಾಜ ಸೇವಕರಾದ ನೆಲ್ಲಮಕ್ಕಡ ಶಂಭು ಸೋಮಯ್ಯ, ಕಾವಾಡಿಚಂಡ ಯು. ಗಣಪತಿ ಉದ್ಘಾಟಿಸಲಿದ್ದಾರೆ. ನಂತರ ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಗಣಪತಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಕೆ. ಸುಬ್ರಮಣಿ, ಕೊಡವ ಸಮಾಜ ಒಕ್ಕೂಟ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ

(ಮೊದಲ ಪುಟದಿಂದ) ಚೆಪ್ಪುಡಿರ ಅರುಣ್ ಮಾಚಯ್ಯ, ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ| ಮೇಚಿರ ಸುಭಾಷ್ ನಾಣಯ್ಯ, ಸವಿತ ಸಮಾಜದ ಅಧ್ಯಕ್ಷ ತಾಪನೆರ ಎಂ. ಸಾಬು, ಬಣ್ಣ ಸಮಾಜದ ಅಧ್ಯಕ್ಷ ಬೀಕಚಂಡ ಬೆಳ್ಯಪ್ಪ, ಅರಮನೆಪಾಲೆ ಸಮಾಜದ ಮುಖ್ಯಸ್ಥ ಅರಮನೆಪಾಲೆರ ದೇವಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪುಸ್ತಕ ಬಿಡುಗಡೆ

‘ಪಟ್ಟೋಲೆ ಪಳಮೆ’ಯ ನಡಿಕೇರಿಯಂಡ ಚಿಣ್ಣಪ್ಪ ಅವರ ಜ್ಞಾಪಕಾರ್ಥವಾಗಿ ನಡೆಸುವ ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಪ್ಪುಡಿರ ಪಿ. ಬೆಳ್ಯಪ್ಪ ವಹಿಸಲಿದ್ದಾರೆ. ಮೆ. ಮುಂಡAಡ ಎಂ. ಮಾಚಯ್ಯ ಅವರು ಬರೆದಿರುವ ‘ಎಳ್ತ್ರ ಜೊಪ್ಪೆ’, ಕ್ಯಾ. ಬಿದ್ದಂಡ ನಾಣಿ ದೇವಯ್ಯ ಬರೆದಿರುವ ‘ಬೊಳ್ಳಿ ಕೊಂಬ್‌ರ ಕೂತ್’, ಸಣ್ಣುವಂಡ ಎಂ. ವಿಶ್ವನಾಥ್ ಬರೆದಿರುವ ‘ಕೂತ್‌ಂಗೊರೆ’, ಉಡುವೆರ ರಾಜೇಶ್ ಉತ್ತಪ್ಪ ಬರೆದಿರುವ ‘ಕೂಟ್‌ಕರಿ’, ಅಜ್ಜಿನಿಕಂಡ ಪ್ರಮೀಳ ನಾಚಯ್ಯ ಬರೆದಿರುವ ‘ಮರಕೊಟ್ಟ’, ಮುಂಡAಡ ಎ. ಪೂಣಚ್ಚ ಬರೆದಿರುವ ‘ಎಳ್ತ್ರ ಪತ್ತಾಯ’, (ದಿ. ಬಾಚಮಡ ಡಿ. ಗಣಪತಿ)ಯವರ ‘ಕೊಡವ: ಓರ್ ಚಿತ್ರಕಥೆ’, ಮುಕ್ಕಾಟಿರ ಸರೋಜ ಸುಬ್ಬಯ್ಯ ಬರೆದಿರುವ ‘ಸರೋಜ’, ಬೊಳ್ಳಚೆಟ್ಟಿರ ವಿಜಯ ಚೆಟ್ಟಿಚ ಬರೆದಿರುವ ‘ಚೆಂಬAದುಡಿ’ ಎಂಬ ಪುಸ್ತಕವನ್ನು ಐಆರ್‌ಎಸ್ ಅಧಿಕಾರಿ ದೇವಣಿರ ಪ್ರೀತ್ ಗಣಪತಿ ಬಿಡುಗಡೆ ಮಾಡಲಿದ್ದಾರೆ.

ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು

ಬೆಳಿಗ್ಗೆ ೧೧ ಗಂಟೆಗೆ ತ್ರಿಭಾಷಾ ಸಾಹಿತಿ ಮಂಡಿರ ಜಯ ಅಪ್ಪಣ್ಣ ಇವರ ಜ್ಞಾಪಕಾರ್ಥವಾಗಿ ನಡೆಯುವ ಕೊಡವ ಆಟ್-ಪಾಟ್ ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ ವಹಿಸಲಿದ್ದು, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಿದ್ದಾಟಂಡ ಎಸ್. ತಮ್ಮಯ್ಯ ವಿವಿಧ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಮಾಜ ಸೇವಕ ಪಾಲಂದಿರ ಎ. ಜೋಯಪ್ಪ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ಪುದಿಯೊಕ್ಕಡ ಕಾಶಿ ಕರುಂಬಯ್ಯ, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಮೋರಿ ರಾಜಪ್ಪ ಇವರ ಜ್ಞಾಪಕಾರ್ಥವಾಗಿ ವಿವಿಧ ಸ್ಫರ್ಧಾ ಕಾರ್ಯಕ್ರಮಗಳಾದ ಉಮ್ಮತ್ತಾಟ್-ಪೊನ್ನಾಜಿರ ಧರಣಿ, ಬೊಳಕಾಟ್-ಕುಕ್ಕೆರ ಜಯ ಚಿಣ್ಣಪ್ಪ, ಕೋಲಾಟ್-ಡಾ| ಅಜ್ಜಿನಿಕಂಡ ಸಿ. ಗಣಪತಿ, ಕತ್ತಿಯಾಟ್-ಮಲ್ಲಪನೆರ ವಿನು ಚಿಣ್ಣಪ್ಪ, ಉರ್‌ಟಿಕೊಟ್ಟ್ ಆಟ್-ಕುಡಿಯರ ಶಾರದ, ಕಪ್ಪೆಯಾಟ್-ಚೊಟ್ಟೆಯಂಡ ಸಮಿತ್ ಸೋಮಣ್ಣ, ಬಾಳೋಪಾಟ್-ಬೊಟ್ಟೋಳಂಡ ಕಾಶಿ ಅಚ್ಚಯ್ಯ, ಕೊಂಬು-ಕೊಟ್ಟ್- ಶ್ರೀನಿವಾಸ್, ವಾಲಗತಾಟ್- ಅಜ್ಜಿಕುಟ್ಟಿರ ಸಿ. ಗಿರೀಶ್, ಸಮ್ಮಂಧ ಕೊಡ್‌ಪ-ಚೇನಂಡ ರಘು ಉತ್ತಪ್ಪ, ಪರಿಯಕಳಿ-ಪಾಲೇಂಗಡ ಅಮಿತ್ ಭೀಮಯ್ಯ, ಮಂಡೆಕ್ ‘ತುಣಿ’ ಕೆಟ್ಟುವ-ಕ್ಯಾಲೇಟಿರ ಪವಿತ್ ಪೂವಯ್ಯನವರು ಚಾಲನೆಯನ್ನು ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.

ಪುಸ್ತಕ ಪ್ರದರ್ಶನ

ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿಯ ಜ್ಞಾಪಕಾರ್ಥವಾಗಿ ಬೆಳಿಗ್ಗೆ ೧೧.೩೦ ಗಂಟೆಗೆ ಪುಸ್ತಕ ಮತ್ತು ವಸ್ತು ಪ್ರದರ್ಶನಕ್ಕೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಕೊಡಗು ಐರಿ ಸಮಾಜದ ಅಧ್ಯಕ್ಷ ಮೇಲತ್ತಂಡ ರಮೇಶ್ ಭಾಗವಹಿಸಲಿದ್ದಾರೆ.

ವಿಚಾರಗೋಷ್ಠಿ

ಡಾ. ಬೊವ್ವೇರಿಯಂಡ ನಂಜಮ್ಮ-ಚಿಣ್ಣಪ್ಪ ಇವರ ಜ್ಞಾಪಕಾರ್ಥವಾಗಿ ಮಧ್ಯಾಹ್ನ ೧೨ ಗಂಟೆಗೆ ನಡೆಯುವ ವಿಚಾರಗೋಷ್ಠಿಗೆ ಅಖಿಲ ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಚಾಲನೆ ನೀಡಲಿದ್ದು, ನಿವೃತ್ತ ಪ್ರಾಧ್ಯಾಪಕ ಚೇಮಿರ ಎಂ. ಭೀಮಯ್ಯ, ನಿವೃತ್ತ ಪ್ರಿನ್ಸಿಪಾಲ್ ಪ್ರೊ. ಪಟ್ಟಡ ಎ. ಪೂವಣ್ಣ, ಕುಶಾಲನಗರ ಕೊಡವ ಸಮಾಜದ ಮಾಜಿ ಅಧ್ಯಕ್ಷ ಮಂಡೇಪAಡ ಬೋಸ್ ಮೊಣ್ಣಪ್ಪ, ಅರಮನೆಪಾಲೆ ಸಮಾಜದ ಅಧ್ಯಕ್ಷ ಅರಮನೆಪಾಲೆರ ಕೆ. ಮಂದಣ್ಣ, ಮಡಿಕೇರಿ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತ ಬೊಳ್ಳಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ. ಅಪ್ಪಣ್ಣ ವಹಿಸಲಿದ್ದು, ಡಾ. ಬೋಡುಕುಟ್ಟಡ ರಾಧಿಕ ಕುಟ್ಟಪ್ಪ “ಕೊಡವ ಸಂಸ್ಕೃತಿರ ಬೊಳ್‌ಚೆಲ್ ಕೆಂಬಟ್ಟಿ ಜನಾಂಗ” ಹಾಗೂ ನಿವೃತ್ತ ಲೆ.ಕ. ಅಜ್ಜಿನಿಕಂಡ ಸಿ. ಬೆಳ್ಯಪ್ಪ “ಕೊಡವಾಮೆರ ಬೊಳಿಲ್ ಒಕ್ಕಾಮೆರ ಬೊಳ್‌ಚೆ” ಎಂಬ ವಿಷಯದ ಬಗ್ಗೆ ವಿಚಾರ ಮಂಡನೆಯನ್ನು ಮಾಡಲಿದ್ದಾರೆ.

ಕವಿಗೋಷ್ಠಿ

ತ್ರಿಭಾಷಾ ಸಾಹಿತಿ ಡಾ. ಐಚೆಟ್ಟಿರ ಮಾ. ಮುತ್ತಣ್ಣ ಇವರ ಜ್ಞಾಪಕಾರ್ಥವಾಗಿ ಮಧ್ಯಾಹ್ನ ೨ ಗಂಟೆಗೆ ನಡೆಯಲಿರುವ ಕವಿಗೋಷ್ಠಿಯ ಉದ್ಘಾಟನೆಯನ್ನು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಿ. ಜಿ. ಅನಂತಶಯನ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕುಡಿಯರ ಮುತ್ತಪ್ಪ ಹಾಗೂ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಭಾಗವಹಿಸಲಿದ್ದಾರೆ. ಕವಿಗೋಷ್ಠಿ ಅಧ್ಯಕ್ಷತೆಯನ್ನು ಕ್ಯಾ. ಬಿದ್ದಂಡ ಡಿ. ನಾಣಯ್ಯ ವಹಿಸಲಿದ್ದು, ಪುತ್ತಾಮನೆ ವಿದ್ಯಾ ಜಗದೀಶ್, ಕೋಟೆರ ಉದಯ ಪೂಣಚ್ಚ, ಅಜ್ಜಿಕುಟ್ಟಿರ ಭವ್ಯ ಬೋಪಣ್ಣ, ವೈಲೇಶ್ ಪಿ. ಎಸ್, ಬಾದುಮಂಡ ಬೀನಾ ಕಾಳಯ್ಯ, ಕಾಣತಂಡ ವಿವೇಕ್ ಅಯ್ಯಪ್ಪ, ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕೊಟ್ರಂಡ ಶ್ರೀಕಾಂತ್ ಪೂವಣ್ಣ, ಪಂದ್ಯAಡ ರೇಣುಕಾ ಸೋಮಯ್ಯ ಮತ್ತು ಮೂಕೊಂಡ ಪುಷ್ಪ ಪೂಣಚ್ಚ ಕವನ ವಾಚನ ಮಾಡಲಿದ್ದಾರೆ ಎಂದರು.

ಕೊಡವ ಸಾಹಿತ್ಯ ಬಲ್ಯನಮ್ಮೆ

ಸಾಹಿತಿ ಬಾಚಮಡ ಡಿ. ಗಣಪತಿ ಇವರ ಜ್ಞಾಪಕಾರ್ಥವಾಗಿ ತಾ. ೩೦ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯುವ ವಿಚಾರಗೋಷ್ಠಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ನಿವೃತ್ತ ಜಂಟಿ ಆಯುಕ್ತರಾದ ಪವಿತ್ರ ಗಣಪತಿ ಉದ್ಘಾಟಿಸಲಿದ್ದು, ಹಿರಿಯ ವಕೀಲ ಮೇರಿಯಂಡ ಕೆ. ಪೂವಯ್ಯ , ಬೇಂಗ್‌ನಾಡ್ ಕೊಡವ ಸಮಾಜದ ಅಧ್ಯಕ್ಷ ಬಾಚರಣಿಯಂಡ ದಿನೇಶ್ ಗಣಪತಿ, ಗೋಣಿಕೊಪ್ಪ ಕಾವೇರಿ ಸಂಸ್ಥೆಯ ಅಧ್ಯಕ್ಷ ಮಂಡೇಪAಡ ಸುಗುಣ ಮುತ್ತಣ್ಣ, ಮಾದಾಪುರ ಕೊಡವ ಸಮಾಜದ ಅಧ್ಯಕ್ಷ ಮಂಡೇಪAಡ ಮನು ಮೇದಪ್ಪ, ಕೊಡವ ತಕ್ಕ್ ಜನಾಂಗಕಾರಡ ಒಕ್ಕೂಟ ಅಧ್ಯಕ್ಷ ಕೊರಕುಟ್ಟಿರ ಸರ ಚಂಗಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಾಹಿತಿ ಮತ್ತು ಸಂಶೋಧಕರಾಗಿರುವ ಮೂಕೊಂಡ ನಿತಿನ್ ಕುಶಾಲಪ್ಪ ವಿಚಾರಗೋಷ್ಠಿ ಅಧ್ಯಕ್ಷತೆ ವಹಿಸಲಿದ್ದಾರೆ. ಮೂವೇರ ರೇಖಾ ಪ್ರಕಾಶ್ ‘ಕೊಡವ ಪೊರಪಾಡ್‌ರ ಭೀರ್ಯ’ ಹಾಗೂ ಸೋಮೇಂಗಡ ಗಣೇಶ್ ತಿಮ್ಮಯ್ಯನವರು ‘ಕೃಷಿ ಬದ್‌ಕ್‌ಲ್ ಕೊಡವಾಮೆ’ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆಯನ್ನು ಮಾಡಲಿದ್ದಾರೆ ಎಂದರು.

ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ

ಬೆಳಿಗ್ಗೆ ೧೧ ಗಂಟೆಗೆ ಅಕಾಡೆಮಿ ಗೌರವ ಪ್ರಶಸ್ತಿ, ಪುಸ್ತಕ ಪ್ರಶಸ್ತಿ ಮತ್ತು ದುಡಿ-ತಾಳ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ವಹಿಸಲಿದ್ದು, ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಉಸ್ತುವಾರಿ ಸಚಿವರು ಕೊಡಗು ಸಣ್ಣ ನೀರಾವರಿ ಮತ್ತು ತಂತ್ರಜ್ಞಾನ ಮಂತ್ರಿ ಎನ್. ಎಸ್. ಬೋಸರಾಜು, ವೀರಾಜಪೇಟೆ ವಿಧಾನ ಸಭಾ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ, ಕರ್ನಾಟಕ ಸರ್ಕಾರದ ಚೀಫ್ ಎಲೆಕ್ಟಿçಕಲ್ ಇನ್ಸ್ಪೆಕ್ಟರ್ ತೀತಿರ ರೋಷನ್ ಅಪ್ಪಚ್ಚು, ಕೊಡಗು ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕರವಟ್ಟಿರ ಟಿ. ಪೆಮ್ಮಯ್ಯ, ಮೈಸೂರು ಕೊಡವ ಸಮಾಜದ ಅಧ್ಯಕ್ಷ ಪೊಂಜAಡ ಗಪ್ಪು ಗಣಪತಿ; ಜಿಲ್ಲಾಧಿಕಾರಿ, ವೆಂಕಟ್ ರಾಜಾ, ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ನಿರ್ದೇಶಕಿ ಧರಣೀದೇವಿ ಮಾಲಗತ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷ ಪಾಂಡAಡ ಕೆ. ಬೋಪಣ್ಣ, ಸ್ಟಾರ್‌ಲಾ ಪಾರ್ಟ್ನರ್ ಸಿ.ಇ.ಒ ಪುಗ್ಗೆರ ಎಂ. ದಿನೇಶ್ ದೇವಯ್ಯ, ಕೊಡಗು ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಐರಿರ ಎ. ಗೋಪಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ವಿ. ಎನ್. ಮಲ್ಲಿಕಾರ್ಜುನ ಸ್ವಾಮಿ, ಅಖಿಲ ಅಮ್ಮಕೊಡವ ಸಮಾಜದ ಅಧ್ಯಕ್ಷ ಬಾನಂಡ ಎನ್. ಪೃಥ್ಯು, ಕೊಡಗು ಹೆಗ್ಗಡೆ ಸಮಾಜದ ಅಧ್ಯಕ್ಷ ಪಡಿಞÁರಂಡ ಜಿ. ಅಯ್ಯಪ್ಪ, ಅರಮನೆಪಾಲೆ ಸಮಾಜದ ಅಧ್ಯಕ್ಷ ಅರಮನೆಪಾಲೆರ ಕೆ. ಮಂದಣ್ಣ, ಕುಡಿಯ ಜನಾಂಗದ ಜಾನಪದ ಕಲಾವಿದ ಕುಡಿಯರ ಕೆ. ಪೊನ್ನಪ್ಪ, ಮೇದ ಜನಾಂಗದ ಜಾನಪದ ಕಲಾವಿದ ಮೇದರ ಚಂದ್ರ, ಕಾಪಾಳ ಜನಾಂಗದ ಜಾನಪದ ಕಲಾವಿದ ಕಾಪಾಳರÀ ತಮ್ಮಯ್ಯ ಪೂಣಚ್ಚ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮಹೇಶ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ರಿಜಿಸ್ಟಾçರ್ ಚಿನ್ನಸ್ವಾಮಿ, ಸದಸ್ಯರುಗಳಾದ ಕಂಬೆಯAಡ ಡೀನಾ ಬೋಜಣ್ಣ, ನಾಯಕಂಡ ಬೇಬಿ ಚಿಣ್ಣಪ್ಪ, ನಾಯಾಂದಿರ ಆರ್. ಶಿವಾಜಿ, ನಾಪಂಡ ಸಿ ಗಣೇಶ್ ಇದ್ದರು.