ಮಡಿಕೇರಿ, ಮಾ. ೧೪: ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮಾಜಿ ಕೊಡಗು ಜಿಲ್ಲಾ ಪಂಚಾಯಿತಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ ಅವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜಾ ಉತ್ತಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದ ಶಿವು ಮಾದಪ್ಪ ಅವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದರು.

ರಾಜೀವ್‌ಗಾAಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ಜನಪ್ರತಿನಿಧಿಯಾಗಿ, ರಾಜಕಾರಿಣಿಯಾಗಿ, ಸಮಾಜಸೇವಕರಾಗಿ ಜಿಲ್ಲೆಯಲ್ಲಿ ಗುರುತಿಸಿಕೊಂಡ ಶಿವು ಮಾದಪ್ಪ ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದರು.

ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಶಿವು ಮಾದಪ್ಪ ಅವರೊಂದಿಗಿನ ಒಡನಾಟವನ್ನು ಸ್ಮರಿಸಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ಕೆಪಿಸಿಸಿ ಸದಸ್ಯರಾದ ಬೇಕಲ್ ರಮಾನಾಥ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ. ಶಶಿಧರ್, ಹೆಚ್.ಎ. ಹಂಸ, ಇಸ್ಮಾಯಿಲ್, ಪಟ್ಟಡ ರಂಜಿ ಪೂಣಚ್ಚ, ಮೀದೇರಿರ ನವೀನ್ ಸೇರಿದಂತೆ ಪ್ರಮುಖರು ಶಿವು ಮಾದಪ್ಪ ಅವರಿಗೆ ನುಡಿನಮನ ಸಲ್ಲಿಸಿದರು.

ಪ್ರಮುಖರಾದ ಕಟ್ರತನ ವೆಂಕಟೇಶ್, ಕೇಟೋಳಿ ಮೋಹನ್ ರಾಜ್, ಪ್ರಕಾಶ್ ಆಚಾರ್ಯ, ಬೊಳ್ಳಿಯಂಡ ಗಣೇಶ್, ಹೊಸೂರು ಸೂರಜ್, ವಸಂತ ಭಟ್, ಮಂಡಿರ ಸದಾ ಮುದ್ದಪ್ಪ, ಖಲೀಲ್ ಭಾಷ, ಕೆ.ಜೆ. ಪೀಟರ್, ಎಂ.ಎA. ಹನೀಫ್, ಮುದ್ದುರಾಜ್, ಮೀನಾಜ್ ಪ್ರವೀಣ್, ಶಶಿ, ಫ್ಯಾನ್ಸಿ ಪಾರ್ವತಿ ಸೇರಿದಂತೆ ನೂರಾರು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.