ನಾಪೋಕ್ಲು, ಮಾ. ೧೬: ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ೩೫ ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಎಸ್.ಎನ್. ಜಾನಕಿ ಇವರಿಗೆ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಕಾರ್ಯ ಕ್ರಮವನ್ನು ನೆರವೇರಿಸಲಾಯಿತು.

ಸಂಘದ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲಪಾಡಿ ಅವರು ವಹಿಸಿ ನೆನಪಿನ ಕಾಣಿಕೆಯನ್ನು ಹಾಗೂ ಸನ್ಮಾನ ಪತ್ರವನ್ನು ನೀಡುವುದರ ಮುಖಾಂತರ ಜಾನಕಿ ಎಸ್.ಎನ್. ಮತ್ತು ಅವರ ಪತಿ ಯಪಾರೆ ಲಿಂಗಪ್ಪ ಇವರನ್ನು ಸಂಘದ ಪರವಾಗಿ ಸನ್ಮಾನಿಸಿದರು.

ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪೆರುಮುಂಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ, ಉಪಾಧ್ಯಕ್ಷರಾದ ನಂಜಪ್ಪ ನಿಡ್ಯಮಲೆ, ಕೆಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ವಿನೀತ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲೋಕೇಶ್ ಸಂಸ್ಥೆಯ ನಿರ್ದೇಶಕರುಗಳು ಹಾಗೂ ಸಿಬ್ಬಂದಿ ವರ್ಗದವರು ಗ್ರಾಮ ಪಂಚಾಯತ್ ಸದಸ್ಯರುಗಳು ಹಿರಿಯ ಸಹಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಎಂ.ಆರ್. ಗೋಪಾಲಕೃಷ್ಣ ಸ್ವಾಗತಿಸಿ ವಂದಿಸಿದರು.