ಕೂಡಿಗೆ, ಮಾ.೧೭ : ಪ್ರತಿ ಎರಡು ವರ್ಷಗಳಿಗೊಮ್ಮೆ ನಡೆಯುವ, ಕೊಡಗು ಜಿಲ್ಲೆಯ ದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಂಗಾಲ ಗ್ರಾಮದಲ್ಲಿ ಶ್ರೀ ಮಂಟಿಗಮ್ಮ ದೇವಿಯ ಜಾತ್ರೆ ಭಾನುವಾರ ರಾತ್ರಿ ಸಂಪನ್ನಗೊAಡಿತು.
ಎರಡು ದಿನಗಳ ಕಾಲ ವಿಜೃಂಭಣೆಯಿAದ ಜರುಗಿದ ಗ್ರಾಮದೇವತೆ ಶ್ರೀ ಮಂಟಿಗಮ್ಮ ದೇವಿಯ ದ್ವೆöÊವಾರ್ಷಿಕ ಜಾತ್ರೋತ್ಸವ ಭಾನುವಾರ ದೇವಿಯ ದೇಗುಲ ಪ್ರವೇಶದ ದ್ವಾರವನ್ನು ಮುಚ್ಚುವ ಮೂಲಕ ಸಂಪನ್ನಗೊAಡಿತು.
ಗ್ರಾಮದಲ್ಲಿ ಶುಕ್ರವಾರ ರಾತ್ರಿಯಿಂದ ಪವಿತ್ರ ಬನದಲ್ಲಿ ಎರಡು ದಿನಗಳ ಕಾಲ ಶ್ರೀ ಮಂಟಿಗಮ್ಮ ದೇವಸ್ಥಾನದಲ್ಲಿ ನಡೆದ ದೇವಿಯ ವಿಶೇಷ ಪೂಜೆ ಹಾಗೂ ಧಾರ್ಮಿಕ ಕೈಂಕರ್ಯಗಳಲ್ಲಿ ಕೊಡಗು ಜಿಲ್ಲೆಯ ಆಸ್ತಿಕರು ಸೇರಿದಂತೆ ನೆರೆಯ ಹಾಸನ ಹಾಗೂ ಮೈಸೂರು ಜಿಲ್ಲೆಗಳ ನೆರೆಯ ಗ್ರಾಮಗಳ ಆಸ್ತಿಕರು ಮತ್ತು ಗ್ರಾಮಸ್ಥರು ಪಾಲ್ಗೊಂಡು ದೇವಿಯ ದರ್ಶನ ಪಡೆದರು.
ಮಂಟಿಗಮ್ಮ ದೇವರ ಮೂರ್ತಿಗೆ ವಿವಿಧ ಪುಷ್ಪಗಳಿಂದ ಅಲಂಕೃತಗೊಳಿಸಲಾಗಿತ್ತು. ದೇವರ ಹಬ್ಬದ ಅಂಗವಾಗಿ ದೇವಸ್ಥಾನ ಸೇರಿದಂತೆ ಇಡೀ ಗ್ರಾಮವನ್ನು ವಿದ್ಯುತ್ ದೀಪದಿಂದ ಕಂಗೊಳಿಸಲಾಗಿತ್ತು.
ದೇವಿಯ ದರ್ಶನಕ್ಕೆ ತೆರಳಿದ್ದ ಭಕ್ತಾದಿಗಳಿಗೆ ದೇವಸ್ಥಾನ ಸಮಿತಿಯ ವತಿಯಿಂದ ದಾನಿಗಳ ನೆರವಿನೊಂದಿಗೆ ಎರಡು ದಿನಗಳ ದಿನವಿಡೀ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ಪವಿತ್ರ ಬನದಲ್ಲಿ ಶ್ರೀ ಮಂಟಿಗಮ್ಮ ದೇವಿಗೆ ಅಲಂಕರಿಸಿದ್ದ ಆಭರಣಗಳನ್ನು ಶನಿವಾರ ರಾತ್ರಿ ಬುಟ್ಟಿಗಳೊಂದಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮರಳಿ ಗ್ರಾಮದ ಕೋಟೆಯ ದೇವಿಯ ಮೂಲಸ್ಥಾನಕ್ಕೆ ತಂದು ಭದ್ರಪಡಿಸಲಾಯಿತು. ಗ್ರಾಮ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಎಸ್.ಚಂದ್ರಶೇಖರ್ , ಉಪಾಧ್ಯಕ್ಷ ಎಸ್.ಜೆ.ಉಮೇಶ್, ಕಾರ್ಯದರ್ಶಿ ಎಂ.ಎಸ್.ಗಣೇಶ್ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆದವು.
ಶ್ರೀ ಮಂಟಿಗಮ್ಮ ದೇವರ ಹಬ್ಬ ಹಾಗೂ ಜಾತ್ರೋತ್ಸವವು ಗ್ರಾಮದ ಜನರಲ್ಲಿ ಪರಸ್ಪರ ಪ್ರೀತಿ- ವಿಶ್ವಾಸದೊಂದಿಗೆ ಗ್ರಾಮದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದತೆ ಹಾಗೂ ಭಾವೈಕ್ಯತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಎಸ್.ವಿ.ನಂಜುAಡಪ್ಪ ಅಭಿಪ್ರಾಯಪಟ್ಟರು. ಜಾತ್ರೋತ್ಸವದಲ್ಲಿ ಸುತ್ತಮುತ್ತಲಿನ ಪ್ರದೇಶಗಳ ನೂರಾರು ಭಕ್ತರು ಭಾಗವಹಿಸಿದರು.