ಸೋಮವಾರಪೇಟೆ, ಮಾ. ೧೭: ಇಲ್ಲಿನ ಕಕ್ಕೆಹೊಳೆ ಬಳಿಯ ಶ್ರೀಮುತ್ತಪ್ಪಸ್ವಾಮಿ ಮತ್ತು ಶ್ರೀಅಯ್ಯಪ್ಪಸ್ವಾಮಿ ದೇವಾಲಯದ ಜಾತ್ರಾ ಮಹೋತ್ಸವವು ಗಣಪತಿ ಹೋಮ ಹಾಗೂ ಧ್ವಜಾರೋಹಣದೊಂದಿಗೆ ಆರಂಭಗೊAಡಿತು.
ದೇವಾಲಯದ ಪ್ರಧಾನ ಅರ್ಚಕ ಮಣಿಕಂಠನ್ ನಂಬೂದರಿ ಅವರ ತಾಂತ್ರಿಕತ್ವದಲ್ಲಿ ಶ್ರೀಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಗಣಪತಿ ಹೋಮ ಜರುಗಿತು. ನಂತರ ಅಧ್ಯಕ್ಷ ವಿನೋದ್ಕುಮಾರ್ ಧ್ವಜಾರೋಹಣವನ್ನು ನೆರವೇರಿಸುವುದರೊಂದಿಗೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ನಂತರ ಕೇರಳದ ಕೊಳಪುರಂ ಮನಹಿಲ್ಲಂ ತಂತ್ರಿಗಳಾದ ಕೃಷ್ಣಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ನೆರವೇರಿತು. ಶ್ರೀಮುತ್ತಪ್ಪನ್ ದೇವಾಲಯದ ಮಡೆಯನ್ ಸುಧೀಶ್ ಕುಮಾರ್, ದೇವಾಲಯ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.