ಮಡಿಕೇರಿ, ಏ. ೧೨: ತಾ. ೧೬ ಮತ್ತು ೧೭ ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಇಟಿ ಪರೀಕ್ಷೆ ಸಿದ್ಧತೆ ಸಂಬAಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಸಿಸಿಟಿವಿ ಇರಬೇಕು. ಪರೀಕ್ಷಾ ಕೇಂದ್ರದಲ್ಲಿ ಶುದ್ಧ ಕುಡಿಯುವ ನೀರಿನ ಪೂರೈಕೆ, ಸ್ವಚ್ಛತೆ, ಶೌಚಾಲಯ ಇರಬೇಕು. ಸಿಇಟಿ ಪರೀಕ್ಷೆ ಸಂಬAಧ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸುಗಮವಾಗಿ ಪರೀಕ್ಷೆ ನಡೆಸಬೇಕು. ಪೊಲೀಸರ ನಿಯೋಜನೆ, ರೂಟ್ ಅಧಿಕಾರಿಗಳು ಮತ್ತು ಮೇಲ್ವಿಚಾರಕರ ನಿಯೋಜನೆ ಮತ್ತಿತರ ಸಂಬAಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗೆ ಸೂಚಿಸಿದರು.

ಪರೀಕ್ಷೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ನಿರಂತರವಾಗಿರಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯರು/ ಶ್ರುಶ್ರೂಷಕರನ್ನು ನಿಯೋಜಿಸಬೇಕು. ಸಿಇಟಿ ಪರೀಕ್ಷಾ ದಿನಗಳಂದು ಸಮಯ ಪಾಲನೆ ಅತಿಮುಖ್ಯವಾಗಿದ್ದು, ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಸಿಇಟಿ ಮಾರ್ಗಸೂಚಿಯಂತೆ ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ. ಮಂಜುಳ ಮಾತನಾಡಿ, ಜಿಲ್ಲಾ ಕೇಂದ್ರ ಮಡಿಕೇರಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಸಂತ ಮೈಕಲರ ಪಿ.ಯು. ಕಾಲೇಜು, ಸಂತ ಜೋಸೆಫರ ಪಿ.ಯು. ಕಾಲೇಜು ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.

ಜಿಲ್ಲೆಯಲ್ಲಿ ೧೭೬೭ ಮಂದಿ ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ೮೪೯, ಸಂತ ಮೈಕಲರ ಪಿ.ಯು. ಕಾಲೇಜಿನಲ್ಲಿ ೨೬೪, ಸಂತ ಜೋಸೆಫರ ಪಿ.ಯು. ಕಾಲೇಜಿನಲ್ಲಿ ೪೧೪ ಮತ್ತು ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ೨೪೦ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ.

ಸಿಇಟಿ ಪರೀಕ್ಷೆ ಸಂಬAಧ ನೋಡೆಲ್ ಅಧಿಕಾರಿಗಳು, ವಿಶೇಷ ಜಾಗೃತ ದಳ, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ಹೀಗೆ ವಿವಿಧ ಹಂತದ ಅಧಿಕಾರಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾ. ೧೬ ರಂದು ಬೆಳಿಗ್ಗೆ ೧೦.೩೦ ಗಂಟೆಯಿAದ ೧೧.೫೦ ರವರೆಗೆ ಭೌತಶಾಸ್ತç, ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ರಸಾಯನ ಶಾಸ್ತç, ತಾ. ೧೭ ರಂದು ಬೆಳಿಗ್ಗೆ ೧೦.೩೦ ರಿಂದ ೧೧.೫೦ ರವರೆಗೆ ಗಣಿತ ಮತ್ತು ಮಧ್ಯಾಹ್ನ ೨.೩೦ ರಿಂದ ೩.೫೦ ರವರೆಗೆ ಜೀವಶಾಸ್ತç ವಿಷಯದ ಸಿಇಟಿ ಪರೀಕ್ಷೆ ನಡೆಯಲಿದೆ.

ಕಳೆದ ಬಾರಿಯಂತೆ ಈ ಬಾರಿಯೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜು, ಮದೆನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿದ್ದರಾಜು ಬೆಳ್ಳಯ್ಯ, ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಜಯ್ ಅವರು ಸಿಇಟಿ ಪರೀಕ್ಷೆ ಸಂಬAಧ ಹಲವು ಮಾಹಿತಿ ನೀಡಿದರು.

ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಡಾ. ಮಧುಸೂದನ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪಿ.ಪಿ. ಕವಿತ, ಪೌರಾಯುಕ್ತ ಹೆಚ್.ಆರ್. ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಸಿಇಟಿ ಪರೀಕ್ಷೆಗೆ ಸಂಬAಧಿಸಿದ ಪದವಿಪೂರ್ವ ವಿವಿಧ ಕಾಲೇಜಿನ ಪ್ರಾಂಶುಪಾಲರು ಇದ್ದರು.