ಮಡಿಕೇರಿ, ಏ. ೨೬: ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕ ಮತ್ತು ಮುಂಬೈ ನ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಮೇ ೩ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ನ ಸತ್ಕಾರ್ ಭವನದಲ್ಲಿ ರಾಜ್ಯಮಟ್ಟದ ಸಾಹಿತ್ಯ - ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ. ಸಮಾರಂಭದ ಆಶಯ ನುಡಿಗಳನ್ನಾಡುವರು. ಮುಂಬೈಯ ದಿ. ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ನ ಸಂಸ್ಥಾಪಕ ಶ್ರೀದೇವಿ ಚಂದ್ರಶೇಖರ್ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಂಬೈ ಸಾಹಿತಿ ಗೋಪಾಲ್ ತ್ರಾಸಿ ಅವರ ನುಡಿ ತೇರು ಹಾಗೂ ದಿ. ಚಂದ್ರಶೇಖರ್ ರಾವ್ ಅವರ ಹರಟೆಗಳು ಎಂಬ ಎರಡು ಕೃತಿಗಳನ್ನು ಮಡಿಕೇರಿ ಆಕಾಶವಾಣಿಯ ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ ಲೋಕಾರ್ಪಣೆ ಮಾಡಲಿದ್ದಾರೆ. ಸಾಹಿತಿ ಹಾಗೂ ರಂಗಭೂಮಿ ಕಲಾವಿದರೂ ಆಗಿರುವ ಮುಂಬೈ ಯೂನಿಯನ್ ಬ್ಯಾಂಕ್ನ ಹಿರಿಯ ಪ್ರಬಂಧಕ ಗೋಪಾಲ್ ತ್ರಾಸಿ ಹಾಗೂ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ನ ಉಪಾಧ್ಯಕ್ಷ ಪ್ರತಾಪ್ ಶೇಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನುಡಿ ತೇರು ಕೃತಿಯ ಬಗ್ಗೆ ಲೇಖಕಿಯಾಗಿರುವ ಮಂಡ್ಯದ ಶ್ವೇತಾ ಮತ್ತು ದಿ. ಚಂದ್ರಶೇಖರ್ ರಾವ್ ಅವರ ಹರಟೆಗಳು ಕೃತಿಯ ಬಗ್ಗೆ ಲೇಖಕಿ ಡಾ. ಕುಸುಮ ಮಾತನಾಡಲಿದ್ದಾರೆ. ಸಮಾಜ ಸೇವೆಗಾಗಿ ಪುಷ್ಪಾ ಕೃಷ್ಣಾನಂದ ಶೇಟ್ ಹಾಗೂ ನಿರೂಪಣಾ ಕೌಶಲ್ಯಕ್ಕಾಗಿ ಮುನೀರ್ ಅಹಮ್ಮದ್ ಅವರನ್ನು ಗೌರವಾರ್ಪಣೆಯೊಂದಿಗೆ ಸನ್ಮಾನಿಸಲಾಗುವುದು. ಲೇಖಕಿ ಸ್ಮಿತಾ ಅಮೃತರಾಜ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಗಳ ಕವಿಗಳು ಭಾಗವಹಿಸಲಿದ್ದಾರೆ.
ಮೂರ್ನಾಡಿನ ಶಿವಂ ನೃತ್ಯ ತಂಡ, ಮಡಿಕೇರಿಯ ಜನನಿ ಮತ್ತು ತಂಡದಿAದ ನೃತ್ಯ ಹಾಗೂ ಕುಶಾಲನಗರದ ಸ್ನೇಹಸಿರಿ ಕಲಾ ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ಆಯೋಜಿತವಾಗಿದೆ ಎಂದು ಸಮರ್ಥ ಕನ್ನಡಿಗರು ಸಂಸ್ಥೆ ಕೊಡಗು ಜಿಲ್ಲಾ ಘಟಕದ ಪ್ರಧಾನ ಸಂಚಾಲಕಿ ಜಯಲಕ್ಷಿö್ಮ ಕೆ. ತಿಳಿಸಿದ್ದಾರೆ.