ಮಡಿಕೇರಿ, ಏ. ೨೮: ಭೂರಹಿತ ಬಡವರ್ಗದ ಮಂದಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಎಐಬಿಎಸ್ಪಿಯ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಷ್ಟಿçÃಯ ಸಂಯೋಜಕ ಎಂ.ಗೋಪಿನಾಥ್ ಹಾಗೂ ಜಿಲ್ಲಾ ಮುಖಂಡರ ನೇತೃತ್ವದಲ್ಲಿ ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ವೃತ್ತದ ಬಳಿಯಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪಕ್ಷದ ಪ್ರಮುಖರು ಮಾತನಾಡಿ, ಕೊಡಗು ಜಿಲ್ಲೆೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಮತ್ತು ಧಾರ್ಮಿಕ ಅಲ್ಪಸಂಖ್ಯಾತರು ಸ್ವಂತ ಸೂರಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ತೋಟಗಳ ಲೈನ್ ಮನೆಗಳಲ್ಲಿ ಬದುಕು ನಡೆಸುತ್ತಿರುವ ಬಡ ಶೋಷಿತ ಕಾರ್ಮಿಕ ವರ್ಗ ಸ್ವಂತ ನೆಲೆಗಾಗಿ ಹೋರಾಟಗಳನ್ನು ನಡೆಸುತ್ತಲೆ ಬಂದಿದೆ. ಸಾವನ್ನಪ್ಪಿದವರಿಗೆ ಕನಿಷ್ಟ ಗೌರವಯುತ ಅಂತಿಮ ಸಂಸ್ಕಾರಕ್ಕೆ ಸ್ಮಶಾನದ ಜಾಗವೂ ಇಲ್ಲದಾಗಿದೆ ಎಂದು ಹೇಳಿದರು.
ಎಐಬಿಎಸ್ಪಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಮೊಣ್ಣಪ್ಪ ಮಾತನಾಡಿ, ವಸತಿ ರಹಿತ ಬಡವರ್ಗದ ಮಂದಿ ಸೂರಿಗಾಗಿ ಸಂಬAಧಪಟ್ಟ ಸಚಿವರುಗಳಿಗೆ, ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು, ನಿರ್ಲಕ್ಷö್ಯ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊದ್ದೂರು, ಮೂರ್ನಾಡು ವಿಭಾಗದ ನಿವೇಶನ ರಹಿತರು ಸುದೀರ್ಘ ಹೋರಾಟವನ್ನು ನಡೆಸುತ್ತಿದ್ದಾರೆ. ಹೀಗಿದ್ದೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲವೆAದು ಆರೋಪಿಸಿದರು.
ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ನಿವೇಶನ ರಹಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಪ್ರತಿ ತಿಂಗಳು ಕುಂದುಕೊರತೆ ಸಭೆ ನಡೆಸಿ ಸಮಸ್ಯೆಗಳ ಬಗೆಹರಿಕೆಗೆ ಮುಂದಾಗಬೇಕೆAದು ತಿಳಿಸಿದರು.
ಎಐಬಿಎಸ್ಪಿಯ ರಾಜ್ಯ ಸಂಯೋಜಕ ಆರ್.ಮುನಿಯಪ್ಪ, ರಾಷ್ಟಿçÃಯ ಸಂಯೋಜಕ ಎಂ. ಗೋಪಿನಾಥ್, ರಾಜ್ಯ ಉಪಾಧ್ಯಕ್ಷರುಗಳಾದ ಸಿಗಾ ನಾಯಕ್, ವೆಂಕಟಗಿರಿಯಯ್ಯ ಸೇರಿದಂತೆ ಜಿಲ್ಲಾ ವ್ಯಾಪ್ತಿಯ ನೂರಾರು ನಿವೇಶನ ರಹಿತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.