ಮಡಿಕೇರಿ, ಏ. ೨೯: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತç ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ ಕೆ.ಸಿ. ಉದ್ಘಾಟಿಸಿದರು.
ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಡಾ. ರೇಣುಕಾ ಆರ್.ಎಸ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಹಕಾರಿ ವಿಷಯದ ಮಹತ್ವ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅವಕಾಶವಿರುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ದಯಾನಂದ, ಸಹಕಾರಿ ಕ್ಷೇತ್ರ ಬಹಳ ಮುಖ್ಯವಾದ ಒಂದು ಆರ್ಥಿಕ ಕ್ಷೇತ್ರವಾಗಿದೆ. ಭಾರತದಲ್ಲಿ ಸಹಕಾರಿ ಕ್ಷೇತ್ರ ಬಹಳ ಆಳವಾಗಿ ಬೆಳೆದಿದೆ. ಜಗತ್ತಿನ ಎಲ್ಲಾ ರಾಷ್ಟçಗಳು ಆರ್ಥಿಕ ಹಿಂಜರಿಕೆಯಿAದ ಸಂಕಷ್ಟ ಅನುಭವಿಸಿದರೂ, ಸಹಕಾರಿ ಕ್ಷೇತ್ರ ಬಹಳ ಪ್ರಬಲವಾಗಿರುವುದರಿಂದ ಅದರ ಪರಿಣಾಮ ಭಾರತದ ಮೇಲೆ ಅಷ್ಟೊಂದು ಉಂಟಾಗಲಿಲ್ಲ ಎಂದು ಹೇಳಿದರು.
ವೇದಿಕೆಯಲ್ಲಿ ಸಹಕಾರಿ ತರಬೇತಿ ಸಂಸ್ಥೆಯ ಉಪನ್ಯಾಸಕ ಸಂಜೀವ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹ ಸಂಚಾಲಕ ಡಾ. ಬಸವರಾಜು, ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ದಮಯಂತಿ ಪಿ.ಟಿ., ಅರ್ಥಶಾಸ್ತç ವಿಭಾಗದ ಉಪನ್ಯಾಸಕಿ ವೀಣಾ ಕೆ.ಎಂ., ಗೀತಾ ಬಿ.ವಿ. ಉಪಸ್ಥಿತರಿದ್ದರು. ನಿಶಾನ್ ಜೋಷೆಪ್ ನಿರ್ವಹಣೆ ಮಾಡಿದರು. ಕಾಲೇಜಿನ ಎಲ್ಲಾ ಅಧ್ಯಾಪಕ ಮತ್ತು ಅಧ್ಯಾಪಕರೇತರ ಹಾಗೂ ವಿದ್ಯಾರ್ಥಿಗಳು ಇದ್ದರು.